ನನ್ನ ಸ್ವಾಭಿಮಾನಕ್ಕೆ ಧಕ್ಕೆ ಆದ್ರೆ ಸುಮ್ಮನಿರಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಟಿಕೆಟ್ ಕೊಟ್ರೆ ಸ್ಪರ್ಧೆ ಮಾಡ್ತೀನಿ, ಇಲ್ಲದಿದ್ರೆ ಸುಮ್ಮನಾಗ್ತೀನಿ. ರಾಜಕೀಯದಲ್ಲಿ ಯಾರಿಗೆ ಯಾರೂ ಶತ್ರು ಅಲ್ಲ. ಯಾರೂ ಈ ರೀತಿ ಮಾಡಬಾರದು ಎಂದು ಸಚಿವ ವಿ.ಸೋಮಣ್ಣ ಕಣ್ಣೀರು ಹಾಕಿದ್ದಾರೆ. ಇತ್ತೀಚೆಗೆ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಎಂಬ ವಿಚಾರ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಆಗ್ತಿತ್ತು. ಈ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಸೋಮಣ್ಣ, ಸುಳ್ಳು ಹೇಳಿ ನಾನು ನನ್ನ ಜೀವನ ಮಾಡಲ್ಲ. ನಮ್ಮ ತಾಯಿ, ತಂದೆ ನನಗೆ ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ನಾನು ಯಾರ ಮುಲಾಜಿನಲ್ಲೂ ಬದುಕಿಲ್ಲ. ಅನಾವಶ್ಯಕವಾಗಿ ಇನ್ನೊಬ್ಬರ ತೇಜೋವಧೆ ಮಾಡೋದು ಒಳ್ಳೆಯದಲ್ಲ ಎಂದು ಸೋಮಣ್ಣ ಕಣ್ಣೀರು ಹಾಕಿದರು.
ನಾನು ಸಂಜೆ ಕಾಲೇಜಿನಲ್ಲಿ ಓದಿದ್ದೇನೆ. ಕಸ್ತೂರಿ ಮಾತ್ರೆ ಮಾರಿದ್ದೇನೆ. ಸ್ವಾಭಿಮಾನಕ್ಕೆ ಧಕ್ಕೆ ಆದಾಗ ನಾನು ಸುಮ್ಮನೆ ಇರೋನಲ್ಲ. ನಾನು ಈಗಾಗಲೇ ಹಲವು ಬಾರಿ ಸ್ಪರ್ಧೆ ಮಾಡಿದ್ದೇನೆ. ಪ್ರಧಾನಿ ಮೋದಿ ಅವರು ಉತ್ತಮ ಮಾರ್ಗದಲ್ಲಿ ನಡೆಯುತ್ತಿದ್ದಾರೆ. ಬಿಜೆಪಿಯಲ್ಲೇ ಮುಂದುವರೆಯುತ್ತೇನೆ. ರಾಜಕೀಯದಲ್ಲಿ ಯಾರಿಗೆ ಯಾರೂ ಶತ್ರು ಅಲ್ಲ ಎಂದು ಸೋಮಣ್ಣ ಹೇಳಿದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…