Latest

ಮ್ಯಾನ್ಮಾರ್‌ನಲ್ಲಿ ಬೌದ್ಧ ಮಠದ ಮೇಲೆ ವೈಮಾನಿಕ ದಾಳಿ: ನಾಲ್ಕು ಮಕ್ಕಳು 23 ನಾಗರಿಕರು ದುರ್ಮರಣ

ನೇಪಿಡಾ: ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಲಿನ್ ಟಾ ಲು ಗ್ರಾಮದಲ್ಲಿ ಇರುವ ಬೌದ್ಧ ಮಠವೊಂದರ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ ಕನಿಷ್ಠ 23 ನಾಗರಿಕರು ಬಲಿಯಾಗಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ದಾಳೆಯಲ್ಲಿ ಮೃತಪಟ್ಟವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಮಾರಕ ದಾಳಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ನಡೆದಿದ್ದು, ಫೈಟರ್ ಜೆಟ್‌ಗಳಿಂದ ಮಠದ ಕಟ್ಟಡದ ಮೇಲೆ ಸ್ಫೋಟಕ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿದ್ದಾರೆ. ದಾಳಿಯ ತೀವ್ರತೆಯಿಂದ ಮಠದಲ್ಲಿ ಆಶ್ರಯ ಪಡೆದಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಸಾಗೈಂಗ್‌ ಪ್ರದೇಶದಲ್ಲಿ ಇತ್ತೀಚೆಗೆ ಮ್ಯಾನ್ಮಾರ್ ಸೇನೆ ಮತ್ತು ಸ್ಥಳೀಯ ಪ್ರತಿಪಕ್ಷ ಗುಂಪುಗಳ ನಡುವೆ ಬಿಕ್ಕಟ್ಟು ತೀವ್ರಗೊಂಡಿದ್ದು, ದೌರ್ಜನ್ಯ ಭೀತಿಯಿಂದ ನೂರಾರು ಗ್ರಾಮಸ್ಥರು ಜೀವ ರಕ್ಷಣೆಗಾಗಿ ಈ ಮಠದಲ್ಲಿ ಆಶ್ರಯ ಪಡೆದಿದ್ದರು. ದಾಳಿಯ ವೇಳೆ ಸುಮಾರು 150ಕ್ಕೂ ಹೆಚ್ಚು ಜನರು ಮಠದೊಳಗೆ ಇದ್ದರು ಎನ್ನಲಾಗುತ್ತಿದೆ.

ಇದೊಂದು ಮಾನವೀಯ ಶೋಕಾಂತಿಕೆಯಾಗಿ ಪರಿಗಣಿಸಲಾಗುತ್ತಿದೆ. ಮಠಗಳು ಯಾವುದೇ ಸಮರ ತಂತ್ರದ ಭಾಗವಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಿದ್ದು, ಇವುಗಳ ಮೇಲೆ ದಾಳಿ ನಡೆಸುವುದು ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳ ಉಲ್ಲಂಘನೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ.

ದಾಳಿ ಬೆನ್ನಲ್ಲೇ ಈ ಘಟನೆಯ ಕುರಿತಂತೆ ಅಂತರರಾಷ್ಟ್ರೀಯ ಪ್ರತಿಕ್ರಿಯೆ ಮೂಡಿದ್ದು, ಯುದ್ಧ ನಿರೋಧಕ ಸಂಘಟನೆಗಳು ಸೂಕ್ತ ತನಿಖೆ ಮತ್ತು ಕ್ರಮದ ಆಗ್ರಹ ಹೊರಡಿಸಿವೆ. ಮ್ಯಾನ್ಮಾರ್ ಸೈನ್ಯದ ವಿರುದ್ಧ ಈಗಾಗಲೇ ಹಲವು ಆರೋಪಗಳು ಇರುವ ನಡುವೆಯೇ ಈ ಘಟನೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಲಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago