ನೇಪಿಡಾ: ಮ್ಯಾನ್ಮಾರ್ನ ಸಾಗೈಂಗ್ ಪ್ರದೇಶದ ಲಿನ್ ಟಾ ಲು ಗ್ರಾಮದಲ್ಲಿ ಇರುವ ಬೌದ್ಧ ಮಠವೊಂದರ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ ಕನಿಷ್ಠ 23 ನಾಗರಿಕರು ಬಲಿಯಾಗಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ದಾಳೆಯಲ್ಲಿ ಮೃತಪಟ್ಟವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಮಾರಕ ದಾಳಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ನಡೆದಿದ್ದು, ಫೈಟರ್ ಜೆಟ್ಗಳಿಂದ ಮಠದ ಕಟ್ಟಡದ ಮೇಲೆ ಸ್ಫೋಟಕ ಬಾಂಬ್ಗಳನ್ನು ಎಸೆದಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿದ್ದಾರೆ. ದಾಳಿಯ ತೀವ್ರತೆಯಿಂದ ಮಠದಲ್ಲಿ ಆಶ್ರಯ ಪಡೆದಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಸಾಗೈಂಗ್ ಪ್ರದೇಶದಲ್ಲಿ ಇತ್ತೀಚೆಗೆ ಮ್ಯಾನ್ಮಾರ್ ಸೇನೆ ಮತ್ತು ಸ್ಥಳೀಯ ಪ್ರತಿಪಕ್ಷ ಗುಂಪುಗಳ ನಡುವೆ ಬಿಕ್ಕಟ್ಟು ತೀವ್ರಗೊಂಡಿದ್ದು, ದೌರ್ಜನ್ಯ ಭೀತಿಯಿಂದ ನೂರಾರು ಗ್ರಾಮಸ್ಥರು ಜೀವ ರಕ್ಷಣೆಗಾಗಿ ಈ ಮಠದಲ್ಲಿ ಆಶ್ರಯ ಪಡೆದಿದ್ದರು. ದಾಳಿಯ ವೇಳೆ ಸುಮಾರು 150ಕ್ಕೂ ಹೆಚ್ಚು ಜನರು ಮಠದೊಳಗೆ ಇದ್ದರು ಎನ್ನಲಾಗುತ್ತಿದೆ.
ಇದೊಂದು ಮಾನವೀಯ ಶೋಕಾಂತಿಕೆಯಾಗಿ ಪರಿಗಣಿಸಲಾಗುತ್ತಿದೆ. ಮಠಗಳು ಯಾವುದೇ ಸಮರ ತಂತ್ರದ ಭಾಗವಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಿದ್ದು, ಇವುಗಳ ಮೇಲೆ ದಾಳಿ ನಡೆಸುವುದು ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳ ಉಲ್ಲಂಘನೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ.
ದಾಳಿ ಬೆನ್ನಲ್ಲೇ ಈ ಘಟನೆಯ ಕುರಿತಂತೆ ಅಂತರರಾಷ್ಟ್ರೀಯ ಪ್ರತಿಕ್ರಿಯೆ ಮೂಡಿದ್ದು, ಯುದ್ಧ ನಿರೋಧಕ ಸಂಘಟನೆಗಳು ಸೂಕ್ತ ತನಿಖೆ ಮತ್ತು ಕ್ರಮದ ಆಗ್ರಹ ಹೊರಡಿಸಿವೆ. ಮ್ಯಾನ್ಮಾರ್ ಸೈನ್ಯದ ವಿರುದ್ಧ ಈಗಾಗಲೇ ಹಲವು ಆರೋಪಗಳು ಇರುವ ನಡುವೆಯೇ ಈ ಘಟನೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಲಿದೆ.
ಬೆಳ್ತಂಗಡಿ, ಜುಲೈ 31: ಧರ್ಮಸ್ಥಳದ ನಿಗೂಢ ಶವ ಹೂತು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT)ಕ್ಕೆ…
ಕೊಪ್ಪಳ, ಜುಲೈ 31: ರಾಜ್ಯದ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಹಿಂದೆ ಹೊರಗುತ್ತಿಗೆ ಆಧಾರಿತ ಕೆಲಸ ಮಾಡುತ್ತಿದ್ದ ಕಳಕಪ್ಪ…
ದೇವದುರ್ಗ: ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭಾರದಲ್ಲಿದ್ದ ಗ್ರೇಡ್-2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ತೋರಿದ…
ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ…
ಬೆಳ್ತಂಗಡಿ, ಜುಲೈ 31 – ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಿಗೂಢವಾಗಿ ಹೂತ ಶವಗಳ ಮಾಹಿತಿ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕುಡಿಯಲು ಹಣ ಕೇಳಿದ ಮಗನಿಗೆ ತಾಯಿ ನಿಷೇಧಿಸಿದ್ದಕ್ಕೆ…