Latest

ಮ್ಯಾನ್ಮಾರ್‌ನಲ್ಲಿ ಬೌದ್ಧ ಮಠದ ಮೇಲೆ ವೈಮಾನಿಕ ದಾಳಿ: ನಾಲ್ಕು ಮಕ್ಕಳು 23 ನಾಗರಿಕರು ದುರ್ಮರಣ

ನೇಪಿಡಾ: ಮ್ಯಾನ್ಮಾರ್‌ನ ಸಾಗೈಂಗ್ ಪ್ರದೇಶದ ಲಿನ್ ಟಾ ಲು ಗ್ರಾಮದಲ್ಲಿ ಇರುವ ಬೌದ್ಧ ಮಠವೊಂದರ ಮೇಲೆ ನಡೆದ ಭೀಕರ ವೈಮಾನಿಕ ದಾಳಿಯಲ್ಲಿ ಕನಿಷ್ಠ 23 ನಾಗರಿಕರು ಬಲಿಯಾಗಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ದಾಳೆಯಲ್ಲಿ ಮೃತಪಟ್ಟವರಲ್ಲಿ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಮಾರಕ ದಾಳಿ ಮಂಗಳವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ನಡೆದಿದ್ದು, ಫೈಟರ್ ಜೆಟ್‌ಗಳಿಂದ ಮಠದ ಕಟ್ಟಡದ ಮೇಲೆ ಸ್ಫೋಟಕ ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿದ್ದಾರೆ. ದಾಳಿಯ ತೀವ್ರತೆಯಿಂದ ಮಠದಲ್ಲಿ ಆಶ್ರಯ ಪಡೆದಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಸಾಗೈಂಗ್‌ ಪ್ರದೇಶದಲ್ಲಿ ಇತ್ತೀಚೆಗೆ ಮ್ಯಾನ್ಮಾರ್ ಸೇನೆ ಮತ್ತು ಸ್ಥಳೀಯ ಪ್ರತಿಪಕ್ಷ ಗುಂಪುಗಳ ನಡುವೆ ಬಿಕ್ಕಟ್ಟು ತೀವ್ರಗೊಂಡಿದ್ದು, ದೌರ್ಜನ್ಯ ಭೀತಿಯಿಂದ ನೂರಾರು ಗ್ರಾಮಸ್ಥರು ಜೀವ ರಕ್ಷಣೆಗಾಗಿ ಈ ಮಠದಲ್ಲಿ ಆಶ್ರಯ ಪಡೆದಿದ್ದರು. ದಾಳಿಯ ವೇಳೆ ಸುಮಾರು 150ಕ್ಕೂ ಹೆಚ್ಚು ಜನರು ಮಠದೊಳಗೆ ಇದ್ದರು ಎನ್ನಲಾಗುತ್ತಿದೆ.

ಇದೊಂದು ಮಾನವೀಯ ಶೋಕಾಂತಿಕೆಯಾಗಿ ಪರಿಗಣಿಸಲಾಗುತ್ತಿದೆ. ಮಠಗಳು ಯಾವುದೇ ಸಮರ ತಂತ್ರದ ಭಾಗವಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಿದ್ದು, ಇವುಗಳ ಮೇಲೆ ದಾಳಿ ನಡೆಸುವುದು ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳ ಉಲ್ಲಂಘನೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ.

ದಾಳಿ ಬೆನ್ನಲ್ಲೇ ಈ ಘಟನೆಯ ಕುರಿತಂತೆ ಅಂತರರಾಷ್ಟ್ರೀಯ ಪ್ರತಿಕ್ರಿಯೆ ಮೂಡಿದ್ದು, ಯುದ್ಧ ನಿರೋಧಕ ಸಂಘಟನೆಗಳು ಸೂಕ್ತ ತನಿಖೆ ಮತ್ತು ಕ್ರಮದ ಆಗ್ರಹ ಹೊರಡಿಸಿವೆ. ಮ್ಯಾನ್ಮಾರ್ ಸೈನ್ಯದ ವಿರುದ್ಧ ಈಗಾಗಲೇ ಹಲವು ಆರೋಪಗಳು ಇರುವ ನಡುವೆಯೇ ಈ ಘಟನೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಲಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago