Latest

ಅಕ್ಷರ ದಾಸೋಹ ಅಕ್ಕಿ ಕದ್ದ ಸಿಬ್ಬಂದಿ!

ಅಕ್ಷರ ದಾಸೋಹದ ಅಕ್ಕಿ ಕದ್ದು, ಸಿಬ್ಬಂದಿ ನೇರವಾಗಿ ಸಿಕ್ಕಿಬಿದ್ದಿರು ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.
ವಡ್ಡಗೆರೆ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದಿ ದಿನಾಂಕ 22-9-2023 ರಂದು ಶಾಲೆಯ ಮಕ್ಕಳಿಗೆ ಬಂದಿರುವಂತಹ ಅಕ್ಕಿಯನ್ನು ತನ್ನ ಮಗನ ಸಹಾಯದೊಂದಿಗೆ ಕದ್ದು ಮನೆಗೆ ಸಾಗಿಸುವಂತಹ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ.
ಸಿಕ್ಕಿಬಿದ್ದ ಬಳಿಕ ಅಡುಗೆ ಸಿಬ್ಬಂದಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಮನೆಯಲ್ಲಿ ಅಕ್ಕಿ ಇಲ್ಲದ ಕಾರಣ ಇಂತ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಹೇಳಿಕೊಂಡಿರುತ್ತಾರೆ.
ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ನಂತರ ಗ್ರಾಮಸ್ಥರು ಪಟ್ಟು ಹಿಡಿದು ಇವರುಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿರುತ್ತಾರೆ. ಆತಂಕಕೀಡಾದ ಅಡುಗೆ ಸಿಬ್ಬಂದಿ ಸ್ಥಳದಲ್ಲೇ ಮೂರ್ಛೆ ಹೋಗಿದ್ದು ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಬಿಪಿ ವ್ಯತ್ಯಾಸ ಆಗಿರುವ ಕಾರಣ ಮೂರ್ಚೆ ಹೋಗಿದ್ದಾರೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಣೆ ನೀಡಿರುತ್ತಾರೆ.
ಶಾಲೆಯಲ್ಲಿ ಅಡುಗೆ ಕೆಲಸ ಮಾಡಲು ಇಬ್ಬರು ಸಿಬ್ಬಂದಿಗಳಿದ್ದು ಇಬ್ಬರು ಸೇರಿಕೊಂಡೆ ಇಂತಹ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಘಟನೆ ನಡೆದ ಬಳಿಕ ಗ್ರಾಮಸ್ಥರು ಇಬ್ಬರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತಾಯಿಸಿರುತ್ತಾರೆ. ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆ ಕಾದುನೋಡಬೇಕಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago