ಅಕ್ಷರ ದಾಸೋಹದ ಅಕ್ಕಿ ಕದ್ದು, ಸಿಬ್ಬಂದಿ ನೇರವಾಗಿ ಸಿಕ್ಕಿಬಿದ್ದಿರು ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.
ವಡ್ಡಗೆರೆ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದಿ ದಿನಾಂಕ 22-9-2023 ರಂದು ಶಾಲೆಯ ಮಕ್ಕಳಿಗೆ ಬಂದಿರುವಂತಹ ಅಕ್ಕಿಯನ್ನು ತನ್ನ ಮಗನ ಸಹಾಯದೊಂದಿಗೆ ಕದ್ದು ಮನೆಗೆ ಸಾಗಿಸುವಂತಹ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ.
ಸಿಕ್ಕಿಬಿದ್ದ ಬಳಿಕ ಅಡುಗೆ ಸಿಬ್ಬಂದಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಮನೆಯಲ್ಲಿ ಅಕ್ಕಿ ಇಲ್ಲದ ಕಾರಣ ಇಂತ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಹೇಳಿಕೊಂಡಿರುತ್ತಾರೆ.
ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ನಂತರ ಗ್ರಾಮಸ್ಥರು ಪಟ್ಟು ಹಿಡಿದು ಇವರುಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿರುತ್ತಾರೆ. ಆತಂಕಕೀಡಾದ ಅಡುಗೆ ಸಿಬ್ಬಂದಿ ಸ್ಥಳದಲ್ಲೇ ಮೂರ್ಛೆ ಹೋಗಿದ್ದು ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಬಿಪಿ ವ್ಯತ್ಯಾಸ ಆಗಿರುವ ಕಾರಣ ಮೂರ್ಚೆ ಹೋಗಿದ್ದಾರೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಣೆ ನೀಡಿರುತ್ತಾರೆ.
ಶಾಲೆಯಲ್ಲಿ ಅಡುಗೆ ಕೆಲಸ ಮಾಡಲು ಇಬ್ಬರು ಸಿಬ್ಬಂದಿಗಳಿದ್ದು ಇಬ್ಬರು ಸೇರಿಕೊಂಡೆ ಇಂತಹ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಘಟನೆ ನಡೆದ ಬಳಿಕ ಗ್ರಾಮಸ್ಥರು ಇಬ್ಬರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತಾಯಿಸಿರುತ್ತಾರೆ. ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆ ಕಾದುನೋಡಬೇಕಿದೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…