Latest

ಅಕ್ಷರ ದಾಸೋಹ ಅಕ್ಕಿ ಕದ್ದ ಸಿಬ್ಬಂದಿ!

ಅಕ್ಷರ ದಾಸೋಹದ ಅಕ್ಕಿ ಕದ್ದು, ಸಿಬ್ಬಂದಿ ನೇರವಾಗಿ ಸಿಕ್ಕಿಬಿದ್ದಿರು ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.
ವಡ್ಡಗೆರೆ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದಿ ದಿನಾಂಕ 22-9-2023 ರಂದು ಶಾಲೆಯ ಮಕ್ಕಳಿಗೆ ಬಂದಿರುವಂತಹ ಅಕ್ಕಿಯನ್ನು ತನ್ನ ಮಗನ ಸಹಾಯದೊಂದಿಗೆ ಕದ್ದು ಮನೆಗೆ ಸಾಗಿಸುವಂತಹ ಸಂದರ್ಭದಲ್ಲಿ ಗ್ರಾಮಸ್ಥರ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ.
ಸಿಕ್ಕಿಬಿದ್ದ ಬಳಿಕ ಅಡುಗೆ ಸಿಬ್ಬಂದಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಮನೆಯಲ್ಲಿ ಅಕ್ಕಿ ಇಲ್ಲದ ಕಾರಣ ಇಂತ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಹೇಳಿಕೊಂಡಿರುತ್ತಾರೆ.
ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ನಂತರ ಗ್ರಾಮಸ್ಥರು ಪಟ್ಟು ಹಿಡಿದು ಇವರುಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿರುತ್ತಾರೆ. ಆತಂಕಕೀಡಾದ ಅಡುಗೆ ಸಿಬ್ಬಂದಿ ಸ್ಥಳದಲ್ಲೇ ಮೂರ್ಛೆ ಹೋಗಿದ್ದು ಗ್ರಾಮಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಬಿಪಿ ವ್ಯತ್ಯಾಸ ಆಗಿರುವ ಕಾರಣ ಮೂರ್ಚೆ ಹೋಗಿದ್ದಾರೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಣೆ ನೀಡಿರುತ್ತಾರೆ.
ಶಾಲೆಯಲ್ಲಿ ಅಡುಗೆ ಕೆಲಸ ಮಾಡಲು ಇಬ್ಬರು ಸಿಬ್ಬಂದಿಗಳಿದ್ದು ಇಬ್ಬರು ಸೇರಿಕೊಂಡೆ ಇಂತಹ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಘಟನೆ ನಡೆದ ಬಳಿಕ ಗ್ರಾಮಸ್ಥರು ಇಬ್ಬರನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತಾಯಿಸಿರುತ್ತಾರೆ. ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿಯ ಕ್ರಮಕ್ಕೆ ಮುಂದಾಗುತ್ತಾರೆ ಕಾದುನೋಡಬೇಕಿದೆ.

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago