Latest

“ಅಲ್ಲಾ ನಮಗೆ ಪ್ರಧಾನಿ ಮೋದಿ ಅಂತಹ ನಾಯಕನನ್ನು ನೀಡಿ” ಪಾಕಿಸ್ತಾನ ಯುವಕನ ಬೇಡಿಕೆ; ವಿಡಿಯೋ ವೈರಲ್.

ಪಾಕಿಸ್ತಾನದ ಯುವಕನೊಬ್ಬ ನಮಗೆ ಭಾರತದ ಪ್ರಧಾನಿ ಮೋದಿಯಂತಹ ನಾಯಕ ಬೇಕು ಎಂದು ಹೇಳುವ ವೀಡಿಯೊವನ್ನ ಪತ್ರಕರ್ತರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ಯುವಕ, ‘ನಾವು ಪಾಕಿಸ್ತಾನದ ಯಾವುದೇ ನಾಯಕನನ್ನ ಬಯಸೋದಿಲ್ಲ. ಭಾರತದ ಪ್ರಧಾನಿ ಮೋದಿಯವರಂತಹ ನಾಯಕನನ್ನ ಮಾತ್ರ ಬಯಸುತ್ತೇವೆ’ ಎಂದು ಹೇಳಿದ್ದಾನೆ. ವೀಡಿಯೊದಲ್ಲಿ, ಪಾಕಿಸ್ತಾನವು ಇನ್ಮುಂದೆ ಭಾರತಕ್ಕೆ ಸಮನಾಗಲು ಸಾಧ್ಯವಿಲ್ಲ ಎಂದಿದ್ದಾನೆ.
ವಿಭಜನೆಯ ಹೊರತಾಗಿಯೂ, ಭಾರತವು ಸಾಕಷ್ಟು ಅಭಿವೃದ್ಧಿಯಾಗಿದೆ. ಆದ್ರೆ, ಪಾಕಿಸ್ತಾನವು ಅಲ್ಲಿಯೇ ಉಳಿದಿದೆ ಎಂದು ಯುವಕ ಹೇಳಿದ್ದಾನೆ. ಇನ್ನು ವಿಭಜನೆಯಾಗದಿದ್ದರೆ, ನಾವು ಇಂದು ಭಾರತದ ಜನರಂತೆ ಟೊಮೆಟೊವನ್ನ 20 ರೂ.ಗೆ ಮತ್ತು ಪೆಟ್ರೋಲ್ ಅನ್ನು 150 ರೂ.ಗೆ ಖರೀದಿಸುವುತ್ತಿದ್ದೇವು ಎಂದ ನೋವು ತೋಡಿಕೊಂಡಿದ್ದಾನೆ. ಇನ್ನು ವೀಡಿಯೊದಲ್ಲಿ, ಯುವಕ ಭಾರತದೊಂದಿಗೆ ಪ್ರಧಾನಿ ಮೋದಿಯವರನ್ನ ಹೊಗಳುತ್ತಿರುವುದನ್ನ ಕಾಣಬಹುದು.

ನಮಗೆ ನವಾಜ್ ಷರೀಫ್ ಅಥವಾ ಇಮ್ರಾನ್ ಖಾನ್ ಬೇಕಿಲ್ಲ, ಅಲ್ಲಾಹನು ನಮಗೆ ಮೋದಿಯನ್ನು ಕೊಡಲಿ.! ಈ ವೀಡಿಯೊವನ್ನ ಫೆಬ್ರವರಿ 20ರಂದು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಪಾಕಿಸ್ತಾನದ ಯೂಟ್ಯೂಬರ್ ಸನಾ ಅಮ್ಜದ್ ಅವರ ಎಪಿಸೋಡ್ನ ಈ ಕ್ಲಿಪ್ ಈಗ ಹೆಚ್ಚು ವೈರಲ್ ಆಗುತ್ತಿದೆ. ಆದಾಗ್ಯೂ, ಯುವಕ ವೀಡಿಯೊದಲ್ಲಿ ಭಾರತ ಮತ್ತು ಪಿಎಂ ಮೋದಿಯವರ ಬಗ್ಗೆ ಅನೇಕ ವಿಷಯಗಳನ್ನ ಹೇಳಿದ್ದಾನೆ ಮತ್ತು ಅವನು ಭಾರತ ಮತ್ತು ಪ್ರಧಾನಿಯನ್ನ ಅನೇಕ ಸ್ಥಳಗಳಲ್ಲಿ ಶ್ಲಾಘಿಸುತ್ತಿರುವುದು ಕಂಡುಬಂದಿದೆ. ವೀಡಿಯೊ ಮುಗಿಯುವ ಮೊದಲು, ಯುವಕ ತನ್ನ ಬಯಕೆಯನ್ನ ವ್ಯಕ್ತಪಡಿಸಿದ್ದು, ಪಾಕಿಸ್ತಾನದಲ್ಲಿ ಯಾವುದೇ ಪಾಕಿಸ್ತಾನಿ ನಾಯಕನನ್ನ ಬೆಂಬಲಿಸೋದಿಲ್ಲ ಎಂದು ಹೇಳಿದ್ದಾನೆ. ನಾವು ನವಾಜ್ ಷರೀಫ್ ಅಥವಾ ಇಮ್ರಾನ್ ಖಾನ್ ಅವರನ್ನ ಬಯಸುವುದಿಲ್ಲ. ಅಷ್ಟೇ ಅಲ್ಲ, ಪರ್ವೇಜ್ ಮುಷರಫ್ ಮತ್ತು ಭುಟ್ಟೋ ಅವರನ್ನೂ ಬಯಸುವುದಿಲ್ಲ ಎಂದು ಹೇಳಿದ್ದಾನೆ. ಅಂತಹ ಪರಿಸ್ಥಿತಿಯಲ್ಲಿ, ಆ ವ್ಯಕ್ತಿಯು ಕ್ಲಿಪ್’ನ ಕೊನೆಯಲ್ಲಿ ‘ಅಲ್ಲಾಹ್ ನಮಗೆ ಮೋದಿಯನ್ನು ನೀಡಿ’ ಎಂದು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾನೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago