Latest

“ಕೊಲೆ ಬೆದರಿಕೆ ಆರೋಪ: ರಜತ್ ಕಿಶನ್ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, ಆ.7: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡ ಈಗಾಗಲೇ ಉತ್ಖನನ ಕಾರ್ಯ ಆರಂಭಿಸಿದ್ದು, ಈ ಮಧ್ಯೆ ಪರಿಸ್ಥಿತಿ ಮತ್ತಷ್ಟು ಚಿಗುರುವ ಲಕ್ಷಣಗಳು ಕಂಡುಬರುತ್ತಿವೆ. ನಿನ್ನೆ ನಡೆದ ಒಂದು ಗಂಭೀರ ಘಟನೆಯಲ್ಲಿ, ಧರ್ಮಸ್ಥಳದ ಸ್ಥಳೀಯರು ಕೆಲ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ್ದು, ಗಲಾಟೆ ಉಂಟಾಗಿದೆ ಎಂದು ಮೂಲಗಳು ತಿಳಿಸುತ್ತಿವೆ.

ಈ ಘಟನೆಯ ವೇಳೆ ಬಿಗ್ ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ರಜತ್ ಕಿಶನ್ ಕೂಡ ಸ್ಥಳದಲ್ಲಿದ್ದರು. ಅವರ ಸಮ್ಮುಖದಲ್ಲಿಯೇ ಈ ಹಲ್ಲೆ ನಡೆದಿದ್ದು, ಬಳಿಕ ರಜತ್ ಸುದ್ದಿಗೋಷ್ಠಿಯಲ್ಲಿ ಶಾಕ್ ನೀಡುವ ಹೇಳಿಕೆ ನೀಡಿದ್ದಾರೆ. “ನನಗೆ ಕೊಲೆ ಬೆದರಿಕೆ ಬಂದಿದೆ,” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಪೋಲೀಸ್ ಆಯುಕ್ತರಿಗೆ ಈ ಕುರಿತು ದೂರು ನೀಡಲಿದ್ದೇನೆ ಎಂದ ರಜತ್, “ಕೊಲೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಬೇಕು. ಅವರಂಥವರಿಗೆ ಬುದ್ಧಿ ಕಲಿಸಲೇಬೇಕು,” ಎಂದು ವಾಗ್ದಾಳಿ ನಡೆಸಿದರು.

ಘಟನೆ ಸಂಬಂಧ ವಿವರ ನೀಡಿದ ರಜತ್, “ನಾನು ಗಿರೀಶ್ ಮತ್ತು ಮಹೇಶ್ ಸರ್‌ರೊಂದಿಗೆ ಮಾತನಾಡಿದ ನಂತರ ಸೌಜನ್ಯ ಅವರ ಮನೆಯಲ್ಲಿ ಅವರ ತಾಯಿಯೊಂದಿಗೆ ಮಾತುಕತೆ ನಡೆಸಿದ್ದೆ. ಈ ವಿಷಯವನ್ನು ತಿಳಿದವರು, ‘ನಿನ್ನನ್ನೇ ಕೊಲೆ ಮಾಡ್ತೀನಿ’ ಎಂದು ಬೆದರಿಕೆ ಹಾಕಿದ್ದಾರೆ. ಇದು ಹೇಗಾದ ನ್ಯಾಯ? ಕೊಲೆ ಮಾಡಿದವರನ್ನು ಬೆಂಬಲಿಸೋದು ಏನು ಸಮಾಜಕ್ಕೆ ತೋರುವ ಮುಖ?” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅವರು ಮುಂದುವರೆದು, “ಇದೇ ಘಟನೆ ಅವರ ಮನೆಯ ಅಕ್ಕತಂಗಿಯರಿಗೆ ಆಗಿದ್ದರೆ, ಅವರು ಹೇಗೆ ಪ್ರತಿಕ್ರಿಯಿಸುತ್ತಿದ್ದರು? ನಮ್ಮ ಸಮಾಜದಲ್ಲಿ ಧ್ವನಿ ಎತ್ತುವವರೇ ಇಲ್ಲದೆ ಹೋಗಿದ್ದಾರೆ. ಇದು ಸುಮ್ಮನೆ ನೋಡುವ ವಿಷಯವಲ್ಲ,” ಎಂದಿದ್ದಾರೆ.

ಈ ವಿವಾದದ ಹಿನ್ನಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೂ ಹೆಚ್ಚಿನ ಹೊಣೆಗಾರಿಕೆ ಬಿದ್ದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago