Latest

“ಕೊಲೆ ಬೆದರಿಕೆ ಆರೋಪ: ರಜತ್ ಕಿಶನ್ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, ಆ.7: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡ ಈಗಾಗಲೇ ಉತ್ಖನನ ಕಾರ್ಯ ಆರಂಭಿಸಿದ್ದು, ಈ ಮಧ್ಯೆ ಪರಿಸ್ಥಿತಿ ಮತ್ತಷ್ಟು ಚಿಗುರುವ ಲಕ್ಷಣಗಳು ಕಂಡುಬರುತ್ತಿವೆ. ನಿನ್ನೆ ನಡೆದ ಒಂದು ಗಂಭೀರ ಘಟನೆಯಲ್ಲಿ, ಧರ್ಮಸ್ಥಳದ ಸ್ಥಳೀಯರು ಕೆಲ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ್ದು, ಗಲಾಟೆ ಉಂಟಾಗಿದೆ ಎಂದು ಮೂಲಗಳು ತಿಳಿಸುತ್ತಿವೆ.

ಈ ಘಟನೆಯ ವೇಳೆ ಬಿಗ್ ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ರಜತ್ ಕಿಶನ್ ಕೂಡ ಸ್ಥಳದಲ್ಲಿದ್ದರು. ಅವರ ಸಮ್ಮುಖದಲ್ಲಿಯೇ ಈ ಹಲ್ಲೆ ನಡೆದಿದ್ದು, ಬಳಿಕ ರಜತ್ ಸುದ್ದಿಗೋಷ್ಠಿಯಲ್ಲಿ ಶಾಕ್ ನೀಡುವ ಹೇಳಿಕೆ ನೀಡಿದ್ದಾರೆ. “ನನಗೆ ಕೊಲೆ ಬೆದರಿಕೆ ಬಂದಿದೆ,” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಪೋಲೀಸ್ ಆಯುಕ್ತರಿಗೆ ಈ ಕುರಿತು ದೂರು ನೀಡಲಿದ್ದೇನೆ ಎಂದ ರಜತ್, “ಕೊಲೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಬೇಕು. ಅವರಂಥವರಿಗೆ ಬುದ್ಧಿ ಕಲಿಸಲೇಬೇಕು,” ಎಂದು ವಾಗ್ದಾಳಿ ನಡೆಸಿದರು.

ಘಟನೆ ಸಂಬಂಧ ವಿವರ ನೀಡಿದ ರಜತ್, “ನಾನು ಗಿರೀಶ್ ಮತ್ತು ಮಹೇಶ್ ಸರ್‌ರೊಂದಿಗೆ ಮಾತನಾಡಿದ ನಂತರ ಸೌಜನ್ಯ ಅವರ ಮನೆಯಲ್ಲಿ ಅವರ ತಾಯಿಯೊಂದಿಗೆ ಮಾತುಕತೆ ನಡೆಸಿದ್ದೆ. ಈ ವಿಷಯವನ್ನು ತಿಳಿದವರು, ‘ನಿನ್ನನ್ನೇ ಕೊಲೆ ಮಾಡ್ತೀನಿ’ ಎಂದು ಬೆದರಿಕೆ ಹಾಕಿದ್ದಾರೆ. ಇದು ಹೇಗಾದ ನ್ಯಾಯ? ಕೊಲೆ ಮಾಡಿದವರನ್ನು ಬೆಂಬಲಿಸೋದು ಏನು ಸಮಾಜಕ್ಕೆ ತೋರುವ ಮುಖ?” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅವರು ಮುಂದುವರೆದು, “ಇದೇ ಘಟನೆ ಅವರ ಮನೆಯ ಅಕ್ಕತಂಗಿಯರಿಗೆ ಆಗಿದ್ದರೆ, ಅವರು ಹೇಗೆ ಪ್ರತಿಕ್ರಿಯಿಸುತ್ತಿದ್ದರು? ನಮ್ಮ ಸಮಾಜದಲ್ಲಿ ಧ್ವನಿ ಎತ್ತುವವರೇ ಇಲ್ಲದೆ ಹೋಗಿದ್ದಾರೆ. ಇದು ಸುಮ್ಮನೆ ನೋಡುವ ವಿಷಯವಲ್ಲ,” ಎಂದಿದ್ದಾರೆ.

ಈ ವಿವಾದದ ಹಿನ್ನಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೂ ಹೆಚ್ಚಿನ ಹೊಣೆಗಾರಿಕೆ ಬಿದ್ದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago