Latest

“ಕೊಲೆ ಬೆದರಿಕೆ ಆರೋಪ: ರಜತ್ ಕಿಶನ್ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, ಆ.7: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣವನ್ನು ತನಿಖೆ ಮಾಡುತ್ತಿರುವ ಎಸ್‌ಐಟಿ ತಂಡ ಈಗಾಗಲೇ ಉತ್ಖನನ ಕಾರ್ಯ ಆರಂಭಿಸಿದ್ದು, ಈ ಮಧ್ಯೆ ಪರಿಸ್ಥಿತಿ ಮತ್ತಷ್ಟು ಚಿಗುರುವ ಲಕ್ಷಣಗಳು ಕಂಡುಬರುತ್ತಿವೆ. ನಿನ್ನೆ ನಡೆದ ಒಂದು ಗಂಭೀರ ಘಟನೆಯಲ್ಲಿ, ಧರ್ಮಸ್ಥಳದ ಸ್ಥಳೀಯರು ಕೆಲ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ್ದು, ಗಲಾಟೆ ಉಂಟಾಗಿದೆ ಎಂದು ಮೂಲಗಳು ತಿಳಿಸುತ್ತಿವೆ.

ಈ ಘಟನೆಯ ವೇಳೆ ಬಿಗ್ ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ರಜತ್ ಕಿಶನ್ ಕೂಡ ಸ್ಥಳದಲ್ಲಿದ್ದರು. ಅವರ ಸಮ್ಮುಖದಲ್ಲಿಯೇ ಈ ಹಲ್ಲೆ ನಡೆದಿದ್ದು, ಬಳಿಕ ರಜತ್ ಸುದ್ದಿಗೋಷ್ಠಿಯಲ್ಲಿ ಶಾಕ್ ನೀಡುವ ಹೇಳಿಕೆ ನೀಡಿದ್ದಾರೆ. “ನನಗೆ ಕೊಲೆ ಬೆದರಿಕೆ ಬಂದಿದೆ,” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಪೋಲೀಸ್ ಆಯುಕ್ತರಿಗೆ ಈ ಕುರಿತು ದೂರು ನೀಡಲಿದ್ದೇನೆ ಎಂದ ರಜತ್, “ಕೊಲೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ತೆಗೆದುಕೊಳ್ಳಬೇಕು. ಅವರಂಥವರಿಗೆ ಬುದ್ಧಿ ಕಲಿಸಲೇಬೇಕು,” ಎಂದು ವಾಗ್ದಾಳಿ ನಡೆಸಿದರು.

ಘಟನೆ ಸಂಬಂಧ ವಿವರ ನೀಡಿದ ರಜತ್, “ನಾನು ಗಿರೀಶ್ ಮತ್ತು ಮಹೇಶ್ ಸರ್‌ರೊಂದಿಗೆ ಮಾತನಾಡಿದ ನಂತರ ಸೌಜನ್ಯ ಅವರ ಮನೆಯಲ್ಲಿ ಅವರ ತಾಯಿಯೊಂದಿಗೆ ಮಾತುಕತೆ ನಡೆಸಿದ್ದೆ. ಈ ವಿಷಯವನ್ನು ತಿಳಿದವರು, ‘ನಿನ್ನನ್ನೇ ಕೊಲೆ ಮಾಡ್ತೀನಿ’ ಎಂದು ಬೆದರಿಕೆ ಹಾಕಿದ್ದಾರೆ. ಇದು ಹೇಗಾದ ನ್ಯಾಯ? ಕೊಲೆ ಮಾಡಿದವರನ್ನು ಬೆಂಬಲಿಸೋದು ಏನು ಸಮಾಜಕ್ಕೆ ತೋರುವ ಮುಖ?” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅವರು ಮುಂದುವರೆದು, “ಇದೇ ಘಟನೆ ಅವರ ಮನೆಯ ಅಕ್ಕತಂಗಿಯರಿಗೆ ಆಗಿದ್ದರೆ, ಅವರು ಹೇಗೆ ಪ್ರತಿಕ್ರಿಯಿಸುತ್ತಿದ್ದರು? ನಮ್ಮ ಸಮಾಜದಲ್ಲಿ ಧ್ವನಿ ಎತ್ತುವವರೇ ಇಲ್ಲದೆ ಹೋಗಿದ್ದಾರೆ. ಇದು ಸುಮ್ಮನೆ ನೋಡುವ ವಿಷಯವಲ್ಲ,” ಎಂದಿದ್ದಾರೆ.

ಈ ವಿವಾದದ ಹಿನ್ನಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೂ ಹೆಚ್ಚಿನ ಹೊಣೆಗಾರಿಕೆ ಬಿದ್ದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

9 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

9 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

19 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

19 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

19 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

19 hours ago