ಬೆಂಗಳೂರು: ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಿಎಸ್ಐ ಭೈರಪ್ಪ ವಿರುದ್ಧ ಕೇಳಿಬಂದಿದೆ. ಇದರ ಜೊತೆಗೆ, ಪತ್ನಿಗೆ ನಿರಂತರವಾಗಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂಬ ಆರೋಪವೂ ಕುಟುಂಬಸ್ಥರಿಂದ ವ್ಯಕ್ತವಾಗಿದೆ.
ಪತ್ನಿಯ ಆರೋಪದ ಪ್ರಕಾರ, ತವರು ಮನೆಯಿಂದ ಪದೇ ಪದೇ ಹಣ ತಂದುಕೊಡುವಂತೆ ಭೈರಪ್ಪ ಒತ್ತಡ ಹೇರುತ್ತಿದ್ದು, ಸುಮಾರು ₹50 ಲಕ್ಷ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಗಲಾಟೆ ನಡೆದ ಸಂದರ್ಭಗಳಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟು, ಬಟ್ಟೆಗಳನ್ನು ಚೀಲದಲ್ಲಿ ತುಂಬಿಕೊಂಡು ಮನೆ ತೊರೆಯುತ್ತಿದ್ದರು ಎಂದೂ ದೂರಲಾಗಿದೆ.
ಇತ್ತೀಚೆಗೆ ನಡೆದ ಗಲಾಟೆಯ ವೇಳೆ ಪತ್ನಿ ಹಾಗೂ ಮಾವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಇದೇ ವೇಳೆ, ಪಿಎಸ್ಐ ವಿರುದ್ಧ ದೂರು ನೀಡಲು ಮುಂದಾದಾಗ ಕೆಂಗೇರಿ ಪೊಲೀಸರು ಸಮರ್ಪಕವಾಗಿ ದೂರು ಸ್ವೀಕರಿಸದೆ, ಪೂರ್ಣ ಪ್ರಮಾಣದ ಪ್ರಕರಣ ದಾಖಲಿಸುವ ಬದಲು ಕೇವಲ ಎನ್ಸಿಆರ್ ದಾಖಲಿಸಿ ಕಳುಹಿಸುತ್ತಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಿಎಸ್ಐ ಭೈರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಲು ಪತ್ನಿ ಮುಂದಾಗಿದ್ದಾರೆ. ಭೈರಪ್ಪ ಪ್ರಸ್ತುತ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಸೂಚನೆ: ಮೇಲಿನ ವಿವರಗಳು ದೂರುದಾರರು ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳನ್ನು ಆಧರಿಸಿವೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ತನಿಖೆ ಮತ್ತು ಅಧಿಕೃತ ಸ್ಪಷ್ಟೀಕರಣದ ಬಳಿಕವಷ್ಟೇ ಆರೋಪಗಳ ಸತ್ಯಾಸತ್ಯತೆ ದೃಢಪಡಬೇಕಿದೆ.
ಬೆಂಗಳೂರು: ಸಾರ್ವಜನಿಕ ಸಾರಿಗೆ ಬಸ್ನಲ್ಲಿ ಬಾಕಿ ಚಿಲ್ಲರೆ ಹಣ ಕೇಳಿದ ಪ್ರಯಾಣಿಕನೊಂದಿಗೆ ನಿರ್ವಾಹಕ (ಕಂಡಕ್ಟರ್) ಜಗಳವಾಡಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ…
ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ತನ್ನ ಪರವಾಗಿ ಅನುಕೂಲಕರ ತೀರ್ಪು ಬರಬೇಕೆಂಬ ಉದ್ದೇಶದಿಂದ ಮಹಿಳಾ ನ್ಯಾಯಾಧೀಶರ ಕುರ್ಚಿಗೆ ಮಾಟ-ಮಂತ್ರ ಮಾಡಿರುವ ಆರೋಪದ ಘಟನೆ…
ಬೆಂಗಳೂರು: ರಾಜಧಾನಿಯ ರಿಯಲ್ ಎಸ್ಟೇಟ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಸಂಚಲನ ಮೂಡಿಸಿರುವ ಪ್ರಕರಣವೊಂದನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಶ್ರೀ ಆದಿಚುಂಚನಗಿರಿ…
ಹರಿಹರ: ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯನ್ನು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ…
ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಮಹತ್ವದ ಸೌಲಭ್ಯ ಘೋಷಿಸಿದೆ. 2026–27ನೇ ಶೈಕ್ಷಣಿಕ ಸಾಲಿನಿಂದ…
ರಾಜ್ಯಾದ್ಯಂತ ಗಮನ ಸೆಳೆದಿರುವ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.…