ಕಲಬುರಗಿ: ಕಮಲಾಪುರ್ ತಾಲೂಕಿನ ಮುದಡ್ಗಾ ಗ್ರಾಮದಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಹನುಮಾನ್ ಮಂದಿರ ಹತ್ತಿರ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಿಂದ ಕೂಡಿದು ಕಾಂಕ್ರೀಟ್ ರಸ್ತೆ ನಿರ್ಮಾಣದ ಮೆಟ್ಲಿಂಗ್ ಕೆಲಸಕ್ಕೆ ಕಳಪೆ ಮಟ್ಟದ ಮಣ್ಣು ಉಯೋಗಿಸಲಾಗಿದೆ. ಗುಣ ಮಟ್ಟದ ಕಾಮಗಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಸ್ತೆಯು ನಿರ್ಮಾಣ ಹಂತದಲ್ಲಿ ಸೀಳಿಕೆಯಾಗಿದ್ದು ಮತ್ತು ತೆಗ್ಗು ಬಿದ್ದಿವೆ ಈ ಸಂಬಂಧ ಈಗಾಗಲೇ ಕಾಮಗಾರಿ ಕುರಿತು ಇಲಾಖೆ ಎಂಜಿನಿಯರ್ ಗಮನಕ್ಕೆ ತರಲಾಗಿದ್ದರೂ ನಿರ್ಲಕ್ಷ ವಹಿಸಿದ್ದಾರೆ. ಮಾಹಿತಿ ಕೇಳಿದರೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಕಳಪೆ ಕಾಮಗಾರಿಗಳು ಹೆಚ್ಚಾಗಿದ್ದು, ಸರಕಾರದ ಹಣ ವ್ಯರ್ಥವಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ತಪ್ಪಿತಸ್ಥ ಎಂಜನೀಯರ್ ಮೇಲೆ ಸೂಕ್ತ ಕ್ರಮ ಕೈಗೊಂಡು ಉತ್ತಮ ರಸ್ತೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯ ಸಂಘಟನೆಗಳು ಆಗ್ರಹಿಸುವುದರ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…