Categories: CrimeLatest

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಮಂಕಿ ಠಾಣೆಯ ಪಿಎಸ್‌ಐ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ

ಭಟ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲ್ಲಾಪುರ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಆರೋಪಿ ಬಾಲಕಿಯನ್ನು ನಂಬಿಸಿ ಭಟ್ಕಳದ ಖಾಸಗಿ ವಸತಿ ಗೃಹಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ದೂರು ದಾಖಲಾದ ತಕ್ಷಣ ಭಟ್ಕಳ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಅಭಿನಂದನ್ ಗೌಡ ಅವರನ್ನು ವಶಕ್ಕೆ ಪಡೆದು ಬಳಿಕ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಾಮನಗರ ಜಿಲ್ಲೆಯ ಕನಕಪುರ ಮೂಲದ ಅಭಿನಂದನ್ ಗೌಡ ಅವರು ಕೆಲವೇ ತಿಂಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆ ಪೋಕ್ಸೋ ಕಾಯ್ದೆಯಡಿ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. ಆರೋಪಗಳ ಕುರಿತು ನ್ಯಾಯಾಲಯದ ಮುಂದೆ ಪ್ರಕರಣ ವಿಚಾರಣೆಗೆ ಒಳಪಡಬೇಕಿದ್ದು, ತನಿಖೆ ಇನ್ನೂ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ದ್ವೇಷದ ಹಿನ್ನೆಲೆ ಕಾರಿಗೆ ಉದ್ದೇಶಪೂರ್ವಕ ಡಿಕ್ಕಿ; ಯುವಕ ಬಂಧನ

ಮುರ್ಡೇಶ್ವರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಜೀವಕ್ಕೆ ಅಪಾಯ ಉಂಟುಮಾಡಲು ಯತ್ನಿಸಿದ ಆರೋಪದಡಿ ಮುರ್ಡೇಶ್ವರ ಪೊಲೀಸರು…

1 hour ago

₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸರ್ವೇ ಅಧಿಕಾರಿ ಲೋಕಾಯುಕ್ತ ಬಲೆಗೆ; ಪರವಾನಗಿ ಪಡೆದ ಸರ್ವೆಯರ್‌ ಸಹ ಬಂಧನ

ಹರಿಹರ: ರೈತ ಮಹಿಳೆಯ ಜಮೀನಿನ ಸರ್ವೇ ಸ್ಕೆಚ್ ತಯಾರಿಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಹರಿಹರ ಭೂ ದಾಖಲೆಗಳ…

1 hour ago

₹80 ಸಾವಿರ ಸಂಬಳ… ಆದರೆ ₹100 ಕೋಟಿ ಆಸ್ತಿ! ತೆಲಂಗಾಣ ವಾಟರ್ ಬೋರ್ಡ್ ಜಿಎಂ ವಿರುದ್ಧ ಭ್ರಷ್ಟಾಚಾರದ ಸ್ಫೋಟಕ ಆರೋಪ

ತೆಲಂಗಾಣ ರಾಜ್ಯದ ವಾಟರ್ ಬೋರ್ಡ್‌ನ ಜನರಲ್ ಮ್ಯಾನೇಜರ್‌ ಆಗಿದ್ದ ಒಬ್ಬ ಸರ್ಕಾರಿ ಅಧಿಕಾರಿ ವಿರುದ್ಧ ಭಾರೀ ಪ್ರಮಾಣದ ಅಕ್ರಮ ಆಸ್ತಿ…

10 hours ago

ಹತ್ತು ಸಾವಿರ ರೂಪಾಯಿ ಶಾಪಿಂಗ್ ಮಾಡಿಸಿಕೊಟ್ಟರೆ ನನ್ನ ಜೊತೆ ಮಲಗುತ್ತೇನೆ ಎಂದು ಇವಳು ಹೇಳಿದ್ದಳು; ವೈರಲ್ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಕ್ಷಣಿಕ ಜನಪ್ರಿಯತೆ, ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವ ಹುಚ್ಚು ಇಂದಿನ ಯುವಪೀಳಿಗೆಯನ್ನು ಯಾವ ಮಟ್ಟಿಗೆ ಕೊಂಡೊಯ್ಯುತ್ತಿದೆ ಎಂಬುದಕ್ಕೆ…

10 hours ago

ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಠಾಣೆ PSI ಸೋಮಲಿಂಗ ಒಡೆಯರ್ ಅಮಾನತು

ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯ PSI ಸೋಮಲಿಂಗ…

10 hours ago

ಅಕ್ರಮ ಸಂಬಂಧ ಬಯಲಾದ ಬಳಿಕ ಗಂಡನ ಕೊಲೆ: ಅಪಘಾತದ ನಾಟಕವಾಡಿ ಕಾಲುವೆಗೆ ಶವ ಎಸೆದ ಪತ್ನಿ ಮತ್ತು ಪ್ರೇಮಿ!

ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು 23 ದಿನಗಳ ಬಳಿಕ ಬಯಲಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಅಥವಾ ಅಪಘಾತವೆಂದು…

10 hours ago