ಐದು ಭರವಸೆಗಳನ್ನು ನೀಡಿದ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯಕ್ರಮವು “ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 (2) ರ ಅಡಿಯಲ್ಲಿ ಲಂಚ ಮತ್ತು ಅನಗತ್ಯ ಪ್ರಭಾವಕ್ಕೆ ಸಮನಾದ ಭ್ರಷ್ಟಾಚಾರದ ಅಭ್ಯಾಸಗಳನ್ನು” ಹೊಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಸಿದ್ದರಾಮಯ್ಯ ಅವರು ಸಂವಿಧಾನ ಮತ್ತು ಜನ ಪ್ರಾತಿನಿಧ್ಯ ಕಾಯ್ದೆಯಲ್ಲಿ ವಿವರಿಸಿರುವ ನಿಯಮಗಳು ಮತ್ತು ತತ್ವಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತ ಐದು ಗ್ಯಾರಂಟಿ ಯೋಜನೆಗಳು ಅಭ್ಯರ್ಥಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ನೀಡಿದ ಕೊಡುಗೆ ಮತ್ತು ಭರವಸೆಗಳ ಸ್ವರೂಪದಲ್ಲಿವೆ. ಪ್ರತಿವಾದಿಯ (ಸಿದ್ದರಾಮಯ್ಯ) ಒಪ್ಪಿಗೆಯೊಂದಿಗೆ ಇದನ್ನು ಮಾಡಲಾಗಿದೆ. ಅವು ವರುಣಾ ಕ್ಷೇತ್ರದ ಮತದಾರರಿಗೆ ತೃಪ್ತಿಯ ರೂಪದಲ್ಲಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅಂದರೆ ಪ್ರತಿವಾದಿಗೆ ಮತ ಚಲಾಯಿಸುವಂತೆ ಮತದಾರರನ್ನು ನೇರವಾಗಿ ಪ್ರೇರೇಪಿಸುವ ಉದ್ದೇಶದಂತಿದೆ. ಇದರ ಪರಿಣಾಮವಾಗಿ ಪ್ರತಿವಾದಿಯ ಪರವಾಗಿ ಮತ ಚಲಾಯಿಸಲಾಗಿದೆ. ಹೀಗಾಗಿ ಸಿದ್ಧಾರಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹತೆಗೊಳಿಸುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಪೀಠವನ್ನು ಕೋರಲಾಗಿತ್ತು. ಈ ಸಂಬಂಧ ಕ್ಷೇತ್ರದ ಖಾಸಗಿ ವ್ಯಕ್ತಿ ಕೆ.ಎಂ.ಶಂಕರ ಅವರು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚುನಾವಣಾ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೇ ಅರ್ಜಿಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್ನಿಂದ ನೋಟಿಸ್ ಜಾರಿ ಮಾಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…