Latest

ಚುನಾವಣಾ ಸಮಯದಲ್ಲಿ ಆಮಿಷ ಆರೋಪ; ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ!

ಐದು ಭರವಸೆಗಳನ್ನು ನೀಡಿದ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯಕ್ರಮವು “ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123 (2) ರ ಅಡಿಯಲ್ಲಿ ಲಂಚ ಮತ್ತು ಅನಗತ್ಯ ಪ್ರಭಾವಕ್ಕೆ ಸಮನಾದ ಭ್ರಷ್ಟಾಚಾರದ ಅಭ್ಯಾಸಗಳನ್ನು” ಹೊಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಸಿದ್ದರಾಮಯ್ಯ ಅವರು ಸಂವಿಧಾನ ಮತ್ತು ಜನ ಪ್ರಾತಿನಿಧ್ಯ ಕಾಯ್ದೆಯಲ್ಲಿ ವಿವರಿಸಿರುವ ನಿಯಮಗಳು ಮತ್ತು ತತ್ವಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿದಂತ ಐದು ಗ್ಯಾರಂಟಿ ಯೋಜನೆಗಳು ಅಭ್ಯರ್ಥಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ನೀಡಿದ ಕೊಡುಗೆ ಮತ್ತು ಭರವಸೆಗಳ ಸ್ವರೂಪದಲ್ಲಿವೆ. ಪ್ರತಿವಾದಿಯ (ಸಿದ್ದರಾಮಯ್ಯ) ಒಪ್ಪಿಗೆಯೊಂದಿಗೆ ಇದನ್ನು ಮಾಡಲಾಗಿದೆ. ಅವು ವರುಣಾ ಕ್ಷೇತ್ರದ ಮತದಾರರಿಗೆ ತೃಪ್ತಿಯ ರೂಪದಲ್ಲಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಅಂದರೆ ಪ್ರತಿವಾದಿಗೆ ಮತ ಚಲಾಯಿಸುವಂತೆ ಮತದಾರರನ್ನು ನೇರವಾಗಿ ಪ್ರೇರೇಪಿಸುವ ಉದ್ದೇಶದಂತಿದೆ. ಇದರ ಪರಿಣಾಮವಾಗಿ ಪ್ರತಿವಾದಿಯ ಪರವಾಗಿ ಮತ ಚಲಾಯಿಸಲಾಗಿದೆ. ಹೀಗಾಗಿ ಸಿದ್ಧಾರಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹತೆಗೊಳಿಸುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಪೀಠವನ್ನು ಕೋರಲಾಗಿತ್ತು. ಈ ಸಂಬಂಧ ಕ್ಷೇತ್ರದ ಖಾಸಗಿ ವ್ಯಕ್ತಿ ಕೆ.ಎಂ.ಶಂಕರ ಅವರು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚುನಾವಣಾ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೇ ಅರ್ಜಿಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ನಿಂದ ನೋಟಿಸ್‌ ಜಾರಿ ಮಾಡಿದೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

16 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago