Latest

ಯೂರಿಯಾ ಗೊಬ್ಬರ ಮಾರಾಟದಲ್ಲಿ ಅಕ್ರಮ ಆರೋಪ: ಪಿಕೆಪಿಎಸ್ ವಿರುದ್ಧ ರೈತರ ಆಕ್ರೋಶ, ಕೃಷಿ ಇಲಾಖೆ ನೋಟಿಸ್

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ನಡೆಸುತ್ತಿರುವ ರಸಗೊಬ್ಬರ ಅಂಗಡಿಯಲ್ಲಿ ಯೂರಿಯಾ ಗೊಬ್ಬರ ಮಾರಾಟದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರೈತರು ಅಂಗಡಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಆರೋಪದ ಪ್ರಕಾರ, ಯೂರಿಯಾ ರಸಗೊಬ್ಬರ ಖರೀದಿಸಲು ಬಂದ ರೈತರಿಗೆ ಕಡ್ಡಾಯವಾಗಿ ನ್ಯಾನೋ ಯೂರಿಯಾವನ್ನೂ ಖರೀದಿಸುವಂತೆ ಒತ್ತಾಯಿಸಲಾಗುತ್ತಿತ್ತು. ನ್ಯಾನೋ ಯೂರಿಯಾ ಖರೀದಿಸದಿದ್ದರೆ ಯೂರಿಯಾ ಗೊಬ್ಬರ ನೀಡುವುದಿಲ್ಲ ಎಂದು ಅಂಗಡಿ ಸಿಬ್ಬಂದಿ ಹೇಳುತ್ತಿದ್ದರು ಎನ್ನಲಾಗಿದೆ.

ಇದರ ಜೊತೆಗೆ, ಬಿಲ್‌ನಲ್ಲಿ “VEG SEEDS” ಎಂದು ನಮೂದಿಸಿ ಯಾವುದೇ ವಸ್ತು ನೀಡದೇ ಹೆಚ್ಚುವರಿಯಾಗಿ ₹102 ವಸೂಲಿ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಈ ಕುರಿತು ಕೃಷಿ ಇಲಾಖೆಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಮೋಹನ ಪ್ರಭು ಬಿರಾದಾರ ಹಾಗೂ ಕೃಷಿ ಅಧಿಕಾರಿ ಚಿದಾನಂದ ಹಿರೇಮಠ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ, ಒಂದು ಚೀಲ ಯೂರಿಯಾ ಗೊಬ್ಬರದ ಸರ್ಕಾರ ನಿಗದಿಪಡಿಸಿದ ಬೆಲೆ ₹266 ಆಗಿದ್ದರೂ, ಅಂಗಡಿಯಲ್ಲಿ ₹300 ವಸೂಲಿ ಮಾಡಿರುವುದು ಹಾಗೂ ರೈತರ ಇಚ್ಛೆಗೆ ವಿರುದ್ಧವಾಗಿ ನ್ಯಾನೋ ಯೂರಿಯಾ ಮಾರಾಟ ಮಾಡಿರುವುದು ಬಿಲ್‌ಗಳು ಮತ್ತು ರೈತರ ಹೇಳಿಕೆಗಳಿಂದ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಸವನ ಬಾಗೇವಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕಾರಣ ಕೇಳುವ ನೋಟಿಸ್ ಜಾರಿಗೊಳಿಸಲಾಗಿದ್ದು, ಮೂರು ದಿನಗಳೊಳಗೆ ಸಮರ್ಪಕ ಉತ್ತರ ನೀಡುವಂತೆ ಸೂಚಿಸಲಾಗಿದೆ. ತೃಪ್ತಿಕರ ಉತ್ತರ ದೊರೆಯದಿದ್ದಲ್ಲಿ ಕಾನೂನು ಕ್ರಮ ಕೈಗೊಂಡು ರಸಗೊಬ್ಬರ ಮಾರಾಟ ಪರವಾನಗಿಯನ್ನು ಅಮಾನತುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಎಚ್ಚರಿಕೆ ನೀಡಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ಐಷಾರಾಮಿ ಬದುಕು! ಕೆಆರ್‌ಐಡಿಎಲ್ ಸೂಪರಿಂಟೆಂಡೆಂಟ್ ಇಂಜಿನಿಯರ್ ಮನೆ-ಫಾರಂಹೌಸ್‌ನಲ್ಲಿ ಅಪಾರ ಆಸ್ತಿ ಪತ್ತೆ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಮತ್ತೊಂದು ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕೆಆರ್‌ಐಡಿಎಲ್ ಸಂಸ್ಥೆಯ ಸೂಪರಿಂಟೆಂಡೆಂಟ್ ಇಂಜಿನಿಯರ್…

5 hours ago

ಬಂದೋಬಸ್ತ್ ಕರ್ತವ್ಯದ ನಡುವೆ ಪೊಲೀಸ್ ವಾಹನದಲ್ಲೇ ಕಾನ್ಸ್ಟೇಬಲ್ ಆತ್ಮಹತ್ಯೆ; ಕಲಬುರಗಿಯಲ್ಲಿ ಬೆಚ್ಚಿಬೀಳಿಸಿದ ಘಟನೆ

ಕಲಬುರಗಿ: ನಗರದ ಜಗತ್ ವೃತ್ತದ ಬಳಿ ಬುಧವಾರ ನಡೆದ ದುರ್ಘಟನೆಯೊಂದು ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ನಗರ ಪ್ರವಾಸದ ಹಿನ್ನೆಲೆಯಲ್ಲಿ…

5 hours ago

ಫೇಸ್‌ಬುಕ್ ಸ್ನೇಹದ ಬಲೆಗೆ ಬಿದ್ದ ತಹಶೀಲ್ದಾರ್! ಸರ್ಕಾರಿ ನಿವಾಸದಲ್ಲೇ ಲೈಂಗಿಕ ದೌರ್ಜನ್ಯ, ದರೋಡೆ, ಕೊಲೆ ಯತ್ನ ಆರೋಪ

ರಾಮನಗರ/ಚನ್ನಪಟ್ಟಣ: ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪರಿಚಯವು ಸರ್ಕಾರಿ ಅಧಿಕಾರಿಯೊಬ್ಬರ ಜೀವನದಲ್ಲಿ ಆಘಾತಕಾರಿ ಘಟನೆಯಾಗಿ ಪರಿಣಮಿಸಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್…

5 hours ago

ಪ್ರೇಮಿಯೊಂದಿಗೆ ಸೇರಿ ಪತಿಯ ಹತ್ಯೆ! ಅಂತ್ಯಸಂಸ್ಕಾರದವರೆಗೂ ನಾಟಕ, 49 ಕರೆಗಳು ಬಯಲು ಮಾಡಿದ ಭೀಕರ ಸಂಚು

ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ಪತ್ನಿಯೊಬ್ಬಳು ತನ್ನ ಪ್ರೇಮಿಯೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಪುಣೆಯಲ್ಲಿ…

5 hours ago

ಮುಸ್ಲಿಂ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ: 8 ವರ್ಷಗಳ ಬಳಿಕ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ…

5 hours ago

ನೀನೊಬ್ಬ ಗಂಡಸೇನಾ? ನಿನ್ನಿಂದ ನನ್ನ ಆಸೆ ತೀರಿಸಲು ಸಾಧ್ಯವಿಲ್ಲ ಎಂದ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ, ಮೂವರು ಮಕ್ಕಳು ಅನಾಥ

ವೇಲೂರು: ತಮಿಳುನಾಡಿನ ವೇಲೂರು ಜಿಲ್ಲೆಯಲ್ಲಿ ದಾಂಪತ್ಯ ಕಲಹದ ಅಂತ್ಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ನಡೆದ…

5 hours ago