Categories: CorruptionLatest

ಬ್ಯಾಲ್ಯಾಳದಲ್ಲಿ ಕಳಪೆ ಸಿಸಿ ರಸ್ತೆ ಕಾಮಗಾರಿ ಆರೋಪ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಗ್ರಾಮಸ್ಥರ ಹೇಳುವಂತೆ, ಕಾಮಗಾರಿಯನ್ನು ಅನುಮೋದಿತ ನೀಲನಕ್ಷೆ ಹಾಗೂ ತಾಂತ್ರಿಕ ಮಾನದಂಡಗಳನ್ನು ಪಾಲಿಸದೇ ನಡೆಸಲಾಗಿದೆ. ರಸ್ತೆ ನಿರ್ಮಾಣಕ್ಕೆ ಬಳಸಿರುವ ಸಾಮಗ್ರಿಗಳ ಗುಣಮಟ್ಟ ಸಮರ್ಪಕವಾಗಿಲ್ಲ. ಅಲ್ಲದೆ, ಸ್ವಚ್ಛಗೊಳಿಸದ ಹಾಗೂ ಕೊಳಚೆ ಇರುವ ರಸ್ತೆಯ ಮೇಲೆಯೇ ಕಾಂಕ್ರೀಟ್ ಸುರಿದಿರುವ ಪರಿಣಾಮ, ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆ ಕೆಲವೆಡೆ ಕಿತ್ತುಹೋಗಿರುವುದು ಕಂಡುಬಂದಿದೆ.

ಸಾರ್ವಜನಿಕರ ಪ್ರಕಾರ, ಕಾಮಗಾರಿಯಲ್ಲಿ ಗುಣಮಟ್ಟಕ್ಕಿಂತ ಹಣದ ದುರುಪಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ರಸ್ತೆ ದಲಿತ ಕಾಲೋನಿಯ ನಿವಾಸಿಗಳು ಪ್ರತಿನಿತ್ಯ ಸಂಚರಿಸುವ ಪ್ರಮುಖ ಮಾರ್ಗವಾಗಿದ್ದು, ಕಳಪೆ ಕಾಮಗಾರಿಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸ್ಪಷ್ಟ ಉತ್ತರ ದೊರೆತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಆದ್ದರಿಂದ, ಇಲಾಖೆಯ ಸಹಾಯಕ ಇಂಜಿನಿಯರ್ ವಿಲಾಸ ರಾಠೋಡ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಸಮಗ್ರ ಪರಿಶೀಲನೆ ನಡೆಸಬೇಕು. ಕಾಮಗಾರಿಯಲ್ಲಿ ಯಾವುದೇ ಲೋಪ ಅಥವಾ ಅಕ್ರಮ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಲಾರಿ ಕ್ಯಾಬಿನ್‌ನಿಂದ ₹20 ಸಾವಿರ ಕಳ್ಳತನ: 13 ಕಿ.ಮೀ. ಬೆನ್ನಟ್ಟಿ ಎಸ್‌ಐ ಹಿಡಿದ ಚಾಲಕ, ಅಮಾನತು ಆದೇಶ!

ಕರ್ತವ್ಯ ನಿರ್ವಹಿಸಬೇಕಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ವೊಬ್ಬರು ಲಾರಿ ಕ್ಯಾಬಿನ್‌ನಿಂದ ಹಣ ಕದ್ದ ಆರೋಪದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಭಾರೀ…

5 hours ago

ಕುಂದಾಪುರದ ಎನ್‌ಎಚ್-66ರಲ್ಲಿ ಭೀಕರ ಅಪಘಾತ: ಭಟ್ಕಳದ ಯುವಕ ಸೇರಿ ಇಬ್ಬರು ದುರ್ಮರಣ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಸಮೀಪದ ಅರಮ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ರಸ್ತೆ…

5 hours ago

ಅತ್ತೆ–ಸೋದರಳಿಯ ಅಕ್ರಮ ಸಂಬಂಧದ ರಕ್ತಸಿಕ್ತ ಅಂತ್ಯ: ಬಾಡಿಗೆ ಮನೆಯಲ್ಲಿ ಯುವಕನ ಶವ, ರೈಲಿಗೆ ಸಿಲುಕಿ ಮಹಿಳೆ ಸಾವು!

ಪ್ರೀತಿ ಮತ್ತು ಅಕ್ರಮ ಸಂಬಂಧಗಳ ಪರಿಣಾಮ ಎಷ್ಟು ಭೀಕರವಾಗಿರಬಹುದು ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅತ್ತೆ…

6 hours ago

ಫೋನ್‌ಪೇ ಮೂಲಕ ಲಂಚ ಸ್ವೀಕಾರ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್…

11 hours ago

ಬ್ಯೂಟಿ ಪಾರ್ಲರ್ ಬೆಡಗಿಯ ಸಹವಾಸ ಕುಟುಂಬವೇ ಸರ್ವನಾಶ; ಪ್ರಿಯತಮೆಯ ಹತ್ಯೆ, ಪ್ರಿಯಕರ ಆತ್ಮಹತ್ಯೆ..!

ಮೊದಲ ನೋಟಕ್ಕೆ ಸಾಮಾನ್ಯ ಸ್ನೇಹದಂತೆ ಆರಂಭವಾದ ಪರಿಚಯ, ಬಳಿಕ ಪ್ರೇಮ ಸಂಬಂಧವಾಗಿ ಬೆಳೆದು ಕೊನೆಗೆ ಭೀಕರ ಕೊಲೆ ಮತ್ತು ಆತ್ಮಹತ್ಯೆಯಲ್ಲಿ…

11 hours ago

ನ್ಯಾಯಾಧೀಶರೊಂದಿಗೆ ಅನುಚಿತ ವರ್ತನೆ: ಅರಕಲಗೂಡು ಪೊಲೀಸ್ ಸಿಬ್ಬಂದಿ ಜಗದೀಶ್ ಅಮಾನತು

ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯ ಸಿಬ್ಬಂದಿ ಜಗದೀಶ್ ಅವರನ್ನು ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಹಾಗೂ ನ್ಯಾಯಾಧೀಶರೊಂದಿಗೆ…

1 day ago