Categories: CorruptionLatest

ಬ್ಯಾಲ್ಯಾಳದಲ್ಲಿ ಕಳಪೆ ಸಿಸಿ ರಸ್ತೆ ಕಾಮಗಾರಿ ಆರೋಪ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ ಕಳಪೆ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಗ್ರಾಮಸ್ಥರ ಹೇಳುವಂತೆ, ಕಾಮಗಾರಿಯನ್ನು ಅನುಮೋದಿತ ನೀಲನಕ್ಷೆ ಹಾಗೂ ತಾಂತ್ರಿಕ ಮಾನದಂಡಗಳನ್ನು ಪಾಲಿಸದೇ ನಡೆಸಲಾಗಿದೆ. ರಸ್ತೆ ನಿರ್ಮಾಣಕ್ಕೆ ಬಳಸಿರುವ ಸಾಮಗ್ರಿಗಳ ಗುಣಮಟ್ಟ ಸಮರ್ಪಕವಾಗಿಲ್ಲ. ಅಲ್ಲದೆ, ಸ್ವಚ್ಛಗೊಳಿಸದ ಹಾಗೂ ಕೊಳಚೆ ಇರುವ ರಸ್ತೆಯ ಮೇಲೆಯೇ ಕಾಂಕ್ರೀಟ್ ಸುರಿದಿರುವ ಪರಿಣಾಮ, ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ರಸ್ತೆ ಕೆಲವೆಡೆ ಕಿತ್ತುಹೋಗಿರುವುದು ಕಂಡುಬಂದಿದೆ.

ಸಾರ್ವಜನಿಕರ ಪ್ರಕಾರ, ಕಾಮಗಾರಿಯಲ್ಲಿ ಗುಣಮಟ್ಟಕ್ಕಿಂತ ಹಣದ ದುರುಪಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ರಸ್ತೆ ದಲಿತ ಕಾಲೋನಿಯ ನಿವಾಸಿಗಳು ಪ್ರತಿನಿತ್ಯ ಸಂಚರಿಸುವ ಪ್ರಮುಖ ಮಾರ್ಗವಾಗಿದ್ದು, ಕಳಪೆ ಕಾಮಗಾರಿಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸ್ಪಷ್ಟ ಉತ್ತರ ದೊರೆತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಆದ್ದರಿಂದ, ಇಲಾಖೆಯ ಸಹಾಯಕ ಇಂಜಿನಿಯರ್ ವಿಲಾಸ ರಾಠೋಡ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಸಮಗ್ರ ಪರಿಶೀಲನೆ ನಡೆಸಬೇಕು. ಕಾಮಗಾರಿಯಲ್ಲಿ ಯಾವುದೇ ಲೋಪ ಅಥವಾ ಅಕ್ರಮ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಗ್ರಾಮಸ್ಥರಿಗೆ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 hour ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 hour ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 hour ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 hour ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

1 hour ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

1 hour ago