ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೃತರನ್ನು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದ್ದು, ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಅವರು ಒಂದು ವಿಡಿಯೋ ಮಾಡಿ ತಮ್ಮ ಮೇಲಾಧಿಕಾರಿಯ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದಾರೆ.
ಪಾವಗಡದ ಆಪ್ ಬಂಡೆ ಪ್ರದೇಶದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲೇ ಅವರು ನೇಣು ಬಿಗಿದುಕೊಂಡು ಜೀವತ್ಯಾಗ ಮಾಡಿದ್ದಾರೆ. ವಿಡಿಯೋದಲ್ಲಿ, ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ಕಿರುಕುಳ ತಾಳಲಾರದೆ ಈ ಹೆಜ್ಜೆ ಇಟ್ಟಿರುವುದಾಗಿ ಮಲ್ಲಿಕಾರ್ಜುನ ಆರೋಪಿಸಿದ್ದಾರೆ. ತಮ್ಮ ಸಾವಿಗೆ ಅವರೇ ಕಾರಣವೆಂದು ಸ್ಪಷ್ಟಪಡಿಸಿ, ಆ ವಿಡಿಯೋವನ್ನು ಸಹೋದ್ಯೋಗಿಗಳಿಗೆ ಕಳುಹಿಸಿದ್ದರೆಂದು ತಿಳಿದುಬಂದಿದೆ.
ಇದೇ ವೇಳೆ ತಮ್ಮ ಕುಟುಂಬದ ಬಗ್ಗೆ ಮಾತನಾಡಿರುವ ಅವರು, ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಚೆನ್ನಾಗಿ ನೋಡಿಕೊಂಡಿದ್ದೇನೆ, ಆದರೆ ಇನ್ನಷ್ಟು ಸಹಾಯ ಮಾಡಬೇಕಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಸಾವಿಗೆ ಯಾರೂ ಸೇಡು ತೀರಿಸಿಕೊಳ್ಳಬಾರದು, ಕಾನೂನು ಮತ್ತು ದೇವರು ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತಾರೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಕಳೆದ ಮೂರು ವರ್ಷಗಳಿಂದ Pavagada ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ಒಂದು ವಾರದಲ್ಲೇ ಅವರ ಸೇವಾ ಅವಧಿ ಮುಕ್ತಾಯವಾಗಬೇಕಿತ್ತು. ಅವರು ಪಾವಗಡ ತಾಲೂಕಿನ ಗುಂಡರ್ಲಾಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…