Latest

ಪಿಎಸ್‌ಐ ಕಿರುಕುಳ ಆರೋಪ: ಕೊಳ್ಳೆಗಾಲದಲ್ಲಿ ಯುವಕನ ಆತ್ಮಹತ್ಯೆ ಯತ್ನ

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಯುವಕನೊಬ್ಬ ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಮಾಹಿತಿ ಹೊರಬಿದ್ದಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್‌ಐ ವರ್ಷಾ ವಿರುದ್ಧ ದುಷ್ಯಂತ್ ಎಂಬ ಯುವಕ ಕಿರುಕುಳಕ್ಕೆ ಒಳಗಾಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಲವು ದಿನಗಳಿಂದ ಪಿಎಸ್‌ಐ ವರ್ಷಾ ಅವರು ದುಷ್ಯಂತ್ ಮೇಲೆ ಅನಾವಶ್ಯಕ ಒತ್ತಡ ತರುವ ಮೂಲಕ ಮಾಸ್ಕಾಗಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ದೂರಲಾಗಿದೆ.

ತಮ್ಮ ಮಗನನ್ನು ಪದೇ ಪದೇ ಠಾಣೆಗೆ ಕರೆಸಿ, ‘ಎನ್‌ಕೌಂಟರ್’ ಮಾಡುವುದಾಗಿ ಬೆದರಿಸುತ್ತಿದ್ದ ಪಿಎಸ್‌ಐ, ನಿನ್ನೆ ದುಷ್ಯಂತ್ ಮನೆಗೆ ಹೋಗಿ ತಾಯಿ ರಾಧಿಕಾ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದರೆಂದು ಕುಟುಂಬದವರು ಆರೋಪಿಸಿದ್ದಾರೆ. ಹಣ ನೀಡದಿದ್ದರೆ ರೌಡಿಶೀಟ್ ತೆರೆಯುವುದಾಗಿ ಬೆದರಿಕೆ ಹಾಕಿರುವುದು ಕೂಡ ಈ ಪ್ರಕರಣದಲ್ಲಿ ಬೆಳಕಿಗೆ ಬಂದಿದೆ.

ಯುವಕರೊಂದಿಗೆ ಈ ಹಿಂದೆ ನಡೆದಿದ್ದ ಸಣ್ಣಪುಟ್ಟ ಗಲಾಟೆ ಘಟನೆಯನ್ನು ಅಡಿಗೆ ಮಾಡಿ, ಪಿಎಸ್‌ಐ ವರ್ಷಾ ದುಷ್ಯಂತ್ ಮೇಲೆ ನಿರಂತರವಾಗಿ ಒತ್ತಡ ತರುವ ಮೂಲಕ ಮಾನಸಿಕವಾಗಿ ಹಿಂಸಿಸುತ್ತಿದ್ದರೆಂದು ಸ್ಥಳೀಯರು ಹೇಳಿದ್ದಾರೆ. ಇವುಗಳ ಪರಿಣಾಮವಾಗಿ ದುಷ್ಯಂತ್ ಮದ್ಯದೊಂದಿಗೆ ಡೊಮ್ಯಾಕ್ಸ್ ಮಿಶ್ರಣ ಮಾಡಿ ಸೇವನೆ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ದುಷ್ಯಂತ್‌ನನ್ನು ಕೊಳ್ಳೆಗಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯ ಐಸಿಯುವಿಗೆ ಸ್ಥಳಾಂತರಿಸಲಾಗಿದೆ.

ಈ ಘಟನೆಯ ನಡುವೆಯೇ, ದುಷ್ಯಂತ್ ಬಾರ್‌ನಲ್ಲಿ ಇತರರೊಂದಿಗೆ ಕಿರಿಕ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋವನ್ನು ಪಿಎಸ್‌ಐ ವರ್ಷಾ ತಾವೇ ಹರಿಬಿಟ್ಟಿದ್ದಾರೆ ಎಂಬ ಆರೋಪವೂ ಹರಡಿದೆ. ಈ ಹಿನ್ನೆಲೆಯಲ್ಲಿ ಕೊಳ್ಳೆಗಾಲ ಠಾಣೆಯಲ್ಲಿ ಪಿಎಸ್‌ಐ ವರ್ಷಾ ವಿರುದ್ಧ ಅಧಿಕೃತ ದೂರು ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಪ್ರಕರಣದ ಹಿನ್ನೆಲೆ ತಿಳಿದು ತನಿಖೆ ಮುಂದುವರಿಸಲಾಗುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

17 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

17 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

17 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

17 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago