ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಐದು ವರ್ಷಗಳ ಹಿಂದೆ ಉಮೇಶ್ ದಾವಣಗೆರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಆರೋಪಿ ಉಮೇಶ್ ಸಂತ್ರಸ್ತ ಯುವತಿಗೆ ಸೋದರ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆದಿದ್ದು, ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ಸಿಪಿಐ ಉಮೇಶ್ಗೆ ಎರಡು ಮದುವೆಯಾಗಿ ಇಬ್ಬರು ಹೆಂಡತಿಯರು ಇದ್ದಾರಂತೆ. ಇದೀಗ ಸಂತ್ರಸ್ತೆಯನ್ನು ಮೂರನೇ ಹೆಂಡತಿಯಂತೆ ನನ್ನೊಂದಿಗೆ ಇರು ಎಂದು ಸಂತ್ರಸ್ತ ಯುವತಿಗೆ ಉಮೇಶ್ ಒತ್ತಾಯಿಸುತ್ತಿದ್ದನು ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.
ಸಂತ್ರಸ್ತೆ ಉಮೇಶ್ ಮಾತಿಗೆ ಒಪ್ಪದಿದ್ದಾಗ ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿ ಬಂದಿದೆ. ಯುವತಿಯ ದೂರಿನ ಹಿನ್ನೆಲೆಯಲ್ಲಿ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಯುವತಿ ದೂರು ನೀಡುತ್ತಿದ್ದಂತೆ ಸಿಪಿಐ ಉಮೇಶ್ ತಲೆಮರೆಸಿಕೊಂಡಿದ್ದಾನೆ.
ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಸಿಪಿಐ ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆದೇಶಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…