ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಐದು ವರ್ಷಗಳ ಹಿಂದೆ ಉಮೇಶ್ ದಾವಣಗೆರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಆರೋಪಿ ಉಮೇಶ್ ಸಂತ್ರಸ್ತ ಯುವತಿಗೆ ಸೋದರ ಸಂಬಂಧಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆದಿದ್ದು, ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪ ಕೇಳಿಬಂದಿದೆ. ಅಂದಹಾಗೆ ಸಿಪಿಐ ಉಮೇಶ್ಗೆ ಎರಡು ಮದುವೆಯಾಗಿ ಇಬ್ಬರು ಹೆಂಡತಿಯರು ಇದ್ದಾರಂತೆ. ಇದೀಗ ಸಂತ್ರಸ್ತೆಯನ್ನು ಮೂರನೇ ಹೆಂಡತಿಯಂತೆ ನನ್ನೊಂದಿಗೆ ಇರು ಎಂದು ಸಂತ್ರಸ್ತ ಯುವತಿಗೆ ಉಮೇಶ್ ಒತ್ತಾಯಿಸುತ್ತಿದ್ದನು ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.
ಸಂತ್ರಸ್ತೆ ಉಮೇಶ್ ಮಾತಿಗೆ ಒಪ್ಪದಿದ್ದಾಗ ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿ ಬಂದಿದೆ. ಯುವತಿಯ ದೂರಿನ ಹಿನ್ನೆಲೆಯಲ್ಲಿ 376 ಕ್ಲಾಸ್ (2)(k)(n), 323 , 504, 506 ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಯುವತಿ ದೂರು ನೀಡುತ್ತಿದ್ದಂತೆ ಸಿಪಿಐ ಉಮೇಶ್ ತಲೆಮರೆಸಿಕೊಂಡಿದ್ದಾನೆ.
ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಸಿಪಿಐ ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆದೇಶಿಸಿದ್ದಾರೆ.
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…
ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…
ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…
ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ…
ಬೆಂಗಳೂರು, ಜುಲೈ 30: ಹಿರಿಯ ನಟ ಹಾಗೂ ನಿರ್ದೇಶಕ ಎಸ್. ನಾರಾಯಣ ಅವರು ತಮ್ಮ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ…