Latest

ಮುಂಬೈ ಏರ್‌ಪೋರ್ಟ್‌ನಲ್ಲಿ ಗ್ಲಾಸ್, ಮಾಸ್ಕ್ ತೆಗೆಯಲು ನಿರಾಕರಿಸಿದ ಅಲ್ಲು ಅರ್ಜುನ್ – CISF ಜೊತೆ ವಾಗ್ವಾದ

ಮುಂಬೈ: ಟಾಲಿವುಡ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಇದೀಗ ‘ಪುಷ್ಪ-2’ ಬಳಿಕ ನಿರ್ದೇಶಕ ಅಟ್ಲಿ ಕುಮಾರ್ ಜೊತೆಗಿನ ಹೊಸ ಚಿತ್ರದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಬಿಗ್‌ ಬಜೆಟ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರಾಜೆಕ್ಟ್‌ ಬಗ್ಗೆ ಈಗಾಗಲೇ ಸಿನಿಮಾ ವಲಯದಲ್ಲಿ ಚರ್ಚೆ ಜೋರಾಗಿದೆ.

ಈ ನಡುವೆ, ಅಲ್ಲು ಅರ್ಜುನ್ ಅವರ ವಿಮಾನ ನಿಲ್ದಾಣದ ವರ್ತನೆಗೆ ಸಂಬಂಧಿಸಿದ ವಿಡಿಯೋ ಶನಿವಾರ (ಆಗಸ್ಟ್ 9) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ CISF ಭದ್ರತಾ ಸಿಬ್ಬಂದಿ ಜೊತೆ ಅವರು ವಾಗ್ವಾದ ನಡೆಸಿದ ದೃಶ್ಯಗಳು ನೆಟ್ಟಿಗರ ಗಮನ ಸೆಳೆದಿವೆ.

ಮಾಹಿತಿಯ ಪ್ರಕಾರ, ಮಾಸ್ಕ್ ಧರಿಸಿಕೊಂಡು ಬಂದಿದ್ದ ಅಲ್ಲು ಅರ್ಜುನ್ ಅವರನ್ನು, ಗುರುತಿನ ಪರಿಶೀಲನೆಗಾಗಿ ಭದ್ರತಾ ಸಿಬ್ಬಂದಿ ಮುಖ ತೋರಿಸುವಂತೆ ಕೇಳಿದ್ದಾರೆ. ಆದರೆ ಈ ಮನವಿಗೆ ಆರಂಭದಲ್ಲಿ ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ಕ್ಷಣ ವಾಗ್ವಾದ ನಡೆದಿರುವುದು ವಿಡಿಯೋದಲ್ಲಿ ಗೋಚರಿಸಿದೆ. ಅವರ ತಂಡದ ಸದಸ್ಯರೂ ಸಿಬ್ಬಂದಿ ಜೊತೆ ಮಾತನಾಡಲು ಮುಂದಾದರೂ, CISF ಸಿಬ್ಬಂದಿ ನಿಯಮ ಪಾಲನೆಗಾಗಿ ಒತ್ತಾಯಿಸಿದ್ದಾರೆ. ಕೊನೆಗೆ, ಅಲ್ಲು ಅರ್ಜುನ್ ಸ್ವಲ್ಪ ಬೇಸರದ ಮುಖಭಾವದೊಂದಿಗೆ ಮಾಸ್ಕ್ ತೆಗೆದು ಮುಖ ತೋರಿಸಿದ್ದಾರೆ.

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರ ಪ್ರತಿಕ್ರಿಯೆಗಳು ಮಿಶ್ರವಾಗಿವೆ. ಕೆಲವರು “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿ ಭದ್ರತಾ ಸಿಬ್ಬಂದಿಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅಲ್ಲು ಅರ್ಜುನ್‌ ಅವರ ವರ್ತನೆಯನ್ನು “ದುರಹಂಕಾರಿ” ಎಂದು ಟೀಕಿಸಿದ್ದಾರೆ.

ಈ ಘಟನೆಯಿಂದ, ಸ್ಟಾರ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರಶ್ನೆಯೂ ಮತ್ತೆ ಚರ್ಚೆಗೆ ಬಂದಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago