Latest

ಮುಂಬೈ ಏರ್‌ಪೋರ್ಟ್‌ನಲ್ಲಿ ಗ್ಲಾಸ್, ಮಾಸ್ಕ್ ತೆಗೆಯಲು ನಿರಾಕರಿಸಿದ ಅಲ್ಲು ಅರ್ಜುನ್ – CISF ಜೊತೆ ವಾಗ್ವಾದ

ಮುಂಬೈ: ಟಾಲಿವುಡ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಇದೀಗ ‘ಪುಷ್ಪ-2’ ಬಳಿಕ ನಿರ್ದೇಶಕ ಅಟ್ಲಿ ಕುಮಾರ್ ಜೊತೆಗಿನ ಹೊಸ ಚಿತ್ರದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಬಿಗ್‌ ಬಜೆಟ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರಾಜೆಕ್ಟ್‌ ಬಗ್ಗೆ ಈಗಾಗಲೇ ಸಿನಿಮಾ ವಲಯದಲ್ಲಿ ಚರ್ಚೆ ಜೋರಾಗಿದೆ.

ಈ ನಡುವೆ, ಅಲ್ಲು ಅರ್ಜುನ್ ಅವರ ವಿಮಾನ ನಿಲ್ದಾಣದ ವರ್ತನೆಗೆ ಸಂಬಂಧಿಸಿದ ವಿಡಿಯೋ ಶನಿವಾರ (ಆಗಸ್ಟ್ 9) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ CISF ಭದ್ರತಾ ಸಿಬ್ಬಂದಿ ಜೊತೆ ಅವರು ವಾಗ್ವಾದ ನಡೆಸಿದ ದೃಶ್ಯಗಳು ನೆಟ್ಟಿಗರ ಗಮನ ಸೆಳೆದಿವೆ.

ಮಾಹಿತಿಯ ಪ್ರಕಾರ, ಮಾಸ್ಕ್ ಧರಿಸಿಕೊಂಡು ಬಂದಿದ್ದ ಅಲ್ಲು ಅರ್ಜುನ್ ಅವರನ್ನು, ಗುರುತಿನ ಪರಿಶೀಲನೆಗಾಗಿ ಭದ್ರತಾ ಸಿಬ್ಬಂದಿ ಮುಖ ತೋರಿಸುವಂತೆ ಕೇಳಿದ್ದಾರೆ. ಆದರೆ ಈ ಮನವಿಗೆ ಆರಂಭದಲ್ಲಿ ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ಕ್ಷಣ ವಾಗ್ವಾದ ನಡೆದಿರುವುದು ವಿಡಿಯೋದಲ್ಲಿ ಗೋಚರಿಸಿದೆ. ಅವರ ತಂಡದ ಸದಸ್ಯರೂ ಸಿಬ್ಬಂದಿ ಜೊತೆ ಮಾತನಾಡಲು ಮುಂದಾದರೂ, CISF ಸಿಬ್ಬಂದಿ ನಿಯಮ ಪಾಲನೆಗಾಗಿ ಒತ್ತಾಯಿಸಿದ್ದಾರೆ. ಕೊನೆಗೆ, ಅಲ್ಲು ಅರ್ಜುನ್ ಸ್ವಲ್ಪ ಬೇಸರದ ಮುಖಭಾವದೊಂದಿಗೆ ಮಾಸ್ಕ್ ತೆಗೆದು ಮುಖ ತೋರಿಸಿದ್ದಾರೆ.

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರ ಪ್ರತಿಕ್ರಿಯೆಗಳು ಮಿಶ್ರವಾಗಿವೆ. ಕೆಲವರು “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿ ಭದ್ರತಾ ಸಿಬ್ಬಂದಿಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅಲ್ಲು ಅರ್ಜುನ್‌ ಅವರ ವರ್ತನೆಯನ್ನು “ದುರಹಂಕಾರಿ” ಎಂದು ಟೀಕಿಸಿದ್ದಾರೆ.

ಈ ಘಟನೆಯಿಂದ, ಸ್ಟಾರ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರಶ್ನೆಯೂ ಮತ್ತೆ ಚರ್ಚೆಗೆ ಬಂದಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

10 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

10 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

10 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

10 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago