Latest

ಮುಂಬೈ ಏರ್‌ಪೋರ್ಟ್‌ನಲ್ಲಿ ಗ್ಲಾಸ್, ಮಾಸ್ಕ್ ತೆಗೆಯಲು ನಿರಾಕರಿಸಿದ ಅಲ್ಲು ಅರ್ಜುನ್ – CISF ಜೊತೆ ವಾಗ್ವಾದ

ಮುಂಬೈ: ಟಾಲಿವುಡ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಇದೀಗ ‘ಪುಷ್ಪ-2’ ಬಳಿಕ ನಿರ್ದೇಶಕ ಅಟ್ಲಿ ಕುಮಾರ್ ಜೊತೆಗಿನ ಹೊಸ ಚಿತ್ರದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಬಿಗ್‌ ಬಜೆಟ್‌ನಲ್ಲಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ರಾಜೆಕ್ಟ್‌ ಬಗ್ಗೆ ಈಗಾಗಲೇ ಸಿನಿಮಾ ವಲಯದಲ್ಲಿ ಚರ್ಚೆ ಜೋರಾಗಿದೆ.

ಈ ನಡುವೆ, ಅಲ್ಲು ಅರ್ಜುನ್ ಅವರ ವಿಮಾನ ನಿಲ್ದಾಣದ ವರ್ತನೆಗೆ ಸಂಬಂಧಿಸಿದ ವಿಡಿಯೋ ಶನಿವಾರ (ಆಗಸ್ಟ್ 9) ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ CISF ಭದ್ರತಾ ಸಿಬ್ಬಂದಿ ಜೊತೆ ಅವರು ವಾಗ್ವಾದ ನಡೆಸಿದ ದೃಶ್ಯಗಳು ನೆಟ್ಟಿಗರ ಗಮನ ಸೆಳೆದಿವೆ.

ಮಾಹಿತಿಯ ಪ್ರಕಾರ, ಮಾಸ್ಕ್ ಧರಿಸಿಕೊಂಡು ಬಂದಿದ್ದ ಅಲ್ಲು ಅರ್ಜುನ್ ಅವರನ್ನು, ಗುರುತಿನ ಪರಿಶೀಲನೆಗಾಗಿ ಭದ್ರತಾ ಸಿಬ್ಬಂದಿ ಮುಖ ತೋರಿಸುವಂತೆ ಕೇಳಿದ್ದಾರೆ. ಆದರೆ ಈ ಮನವಿಗೆ ಆರಂಭದಲ್ಲಿ ಅಲ್ಲು ಅರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲ ಕ್ಷಣ ವಾಗ್ವಾದ ನಡೆದಿರುವುದು ವಿಡಿಯೋದಲ್ಲಿ ಗೋಚರಿಸಿದೆ. ಅವರ ತಂಡದ ಸದಸ್ಯರೂ ಸಿಬ್ಬಂದಿ ಜೊತೆ ಮಾತನಾಡಲು ಮುಂದಾದರೂ, CISF ಸಿಬ್ಬಂದಿ ನಿಯಮ ಪಾಲನೆಗಾಗಿ ಒತ್ತಾಯಿಸಿದ್ದಾರೆ. ಕೊನೆಗೆ, ಅಲ್ಲು ಅರ್ಜುನ್ ಸ್ವಲ್ಪ ಬೇಸರದ ಮುಖಭಾವದೊಂದಿಗೆ ಮಾಸ್ಕ್ ತೆಗೆದು ಮುಖ ತೋರಿಸಿದ್ದಾರೆ.

ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರ ಪ್ರತಿಕ್ರಿಯೆಗಳು ಮಿಶ್ರವಾಗಿವೆ. ಕೆಲವರು “ನಿಯಮ ಎಲ್ಲರಿಗೂ ಒಂದೇ” ಎಂದು ಹೇಳಿ ಭದ್ರತಾ ಸಿಬ್ಬಂದಿಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅಲ್ಲು ಅರ್ಜುನ್‌ ಅವರ ವರ್ತನೆಯನ್ನು “ದುರಹಂಕಾರಿ” ಎಂದು ಟೀಕಿಸಿದ್ದಾರೆ.

ಈ ಘಟನೆಯಿಂದ, ಸ್ಟಾರ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಪಾಲನೆಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರಶ್ನೆಯೂ ಮತ್ತೆ ಚರ್ಚೆಗೆ ಬಂದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

14 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago