ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ 9ನೇ ಮುಖ್ಯ ರಸ್ತೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಆಯಂಬುಲೆನ್ಸ್ವೊಂದು ತರಕಾರಿ ಅಂಗಡಿಗೆ ನುಗ್ಗಿದ ಪರಿಣಾಮ ಓರ್ವ ವ್ಯಾಪಾರಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ರಮೇಶ್ (49) ಎಂದು ಗುರುತಿಸಲಾಗಿದೆ. ಅವರು ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಪಘಾತದ ವೇಳೆ ಅಂಗಡಿಯಲ್ಲಿ ಇದ್ದಾಗ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಲಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಆಯಂಬುಲೆನ್ಸ್ನಲ್ಲಿ ಯಾವುದೇ ರೋಗಿ ಇರಲಿಲ್ಲದರೂ, ಚಾಲಕ ಅತಿವೇಗದಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ನಿರೀಕ್ಷೆಗೆ ವಿರುದ್ಧವಾಗಿ ಆಯಂಬುಲೆನ್ಸ್ಗೆ ಬ್ರೇಕ್ ಫೇಲ್ ಆಗಿದ್ದು, ನೇರವಾಗಿ ತರಕಾರಿ ಅಂಗಡಿಗೆ ನುಗ್ಗಿದೆ. ಈ ವೇಳೆ ಎರಡು ತಳ್ಳುವ ಗಾಡಿಗಳು ಹಾಗೂ ಒಂದು ಆಟೋಕ್ಕೆ ಸಹ ಹಾನಿಯಾಗಿದೆ.
ಘಟನೆಗೆ ಕೋಪಗೊಂಡ ಸ್ಥಳೀಯರು ಆಯಂಬುಲೆನ್ಸ್ ಚಾಲಕ ಚಿರಂಜೀವಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದರು. ನಂತರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…