ಬೆಂಗಳೂರು: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ನಡುವೆಯೇ, ಹುಳಿಮಾವು ಪ್ರದೇಶದಲ್ಲಿ ಮಹಿಳೆ ಹಾಗೂ ಆಕೆಯ ಕುಟುಂಬದ ಮೇಲೆ 10–12 ಕ್ಯಾಬ್ ಚಾಲಕರ ಗುಂಪು ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕಾರಿನ ಗಾಜು ಒಡೆದು, ಅಪಾರ್ಟ್ಮೆಂಟ್ವರೆಗೆ ಹಿಂಬಾಲಿಸಿ ಹಲ್ಲೆ ನಡೆಸಿರುವ ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಪೀಡಿತೆಯ ದೂರಿನ ಪ್ರಕಾರ, ರಸ್ತೆಯಲ್ಲಿ ಓಡುತ್ತಿದ್ದಾಗ ಒಬ್ಬ ಕ್ಯಾಬ್ ಚಾಲಕ ಅಡ್ಡಾದಿಡ್ಡಿಯಾಗಿ ಹಿಂದಿಕ್ಕಿ, ತಕ್ಷಣವೇ ವಾಹನ ನಿಲ್ಲಿಸಿ ಕ್ಯಾತೆ ತೆಗೆದು ವಾಗ್ವಾದ ಶುರುಮಾಡಿದ್ದ. ಬಳಿಕ, ಆತನ ಜೊತೆ ಸೇರಿದ ಚಾಲಕರ ಗುಂಪು ಇಟ್ಟಿಗೆ ಹಿಡಿದುಕೊಂಡು ಆಕೆಯ ಕಾರನ್ನು ಅಪಾರ್ಟ್ಮೆಂಟ್ ವರೆಗೆ ಹಿಂಬಾಲಿಸಿದೆ.
ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಒಬ್ಬ ವ್ಯಕ್ತಿ ಕಾರಿನ ಗಾಜು ಬಲವಾಗಿ ಹೊಡೆದು ಒಡೆದಿರುವುದು, ನಂತರ ಹಲವಾರು ಕ್ಯಾಬ್ ಚಾಲಕರು ಆಕೆಯ ವಾಹನವನ್ನು ಸುತ್ತುವರೆದಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇನ್ನೊಂದು ದೃಶ್ಯದಲ್ಲಿ, ಗುಂಪು ನೇರವಾಗಿ ಆಕೆಯ ವಸತಿ ಪ್ರದೇಶಕ್ಕೆ ಪ್ರವೇಶಿಸಿರುವುದು ದಾಖಲಾಗಿದೆ.
ಆ ಸಂದರ್ಭದಲ್ಲಿ ಮಧ್ಯಪ್ರವೇಶಿಸಲು ಯತ್ನಿಸಿದ ಆಕೆಯ ತಂದೆ ಹಾಗೂ ಸಂಬಂಧಿಕರ ಮೇಲೂ ದಾಳಿ ನಡೆದಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದಾಳಿಕೋರರು ಕಾರನ್ನು ಹಾನಿಗೊಳಿಸಿದ್ದು, ಕುಟುಂಬಕ್ಕೆ ದೈಹಿಕ ಹಾಗೂ ಮಾನಸಿಕ ಹಾನಿ ಉಂಟುಮಾಡಿದ್ದಾರೆ.
ಪೀಡಿತೆಯ ತಂದೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲು ಒತ್ತಾಯಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್ಎಸ್) ಹಲವು ಕಲಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಗರದಲ್ಲಿ ಇದೇ ಮೊದಲಲ್ಲದ ರೋಡ್ ರೇಜ್ ಘಟನೆ ಆಗಿರುವುದರಿಂದ, ಸಾರ್ವಜನಿಕರು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…