Latest

ಅಪಘಾತಕ್ಕೆ ಆಹ್ವಾನ ಕೊಡುತ್ತಿರುವ ರಸ್ತೆ; ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಕರು!

ಭಾರತ ದೇಶದಲ್ಲಿ ರೈತ ಎಂದರೆ ಅವನಿಗೆ ಆದಂತಹ ಸ್ಥಾನವಿದೆ. ರೈತ ಜಮಿನೀನಲ್ಲಿ ಉಳುಮೆ ಮಾಡಿ ಬೆಳೆದೆ ಧವಸ ಧಾನ್ಯಗಳನ್ನು ಮಾರುಕಟ್ಟೆಗೆ ತಂದ ಮೇಲೆ ನಮಗೆ ನಿಮಗೆ ಎಲ್ಲರಿಗೂ ಧವಸ ಧಾನ್ಯ ಹಾಗೂ ಅನ್ನ ಸಿಗುತ್ತದೆ .ರೈತ ಈ ದೇಶದ ಬೆನ್ನೆಲಬು. ಜಾನುವಾರುಗಳನ್ನು ಎಲ್ಲರೂ ಪ್ರೀತಿ ವಾತ್ಸಲ್ಯದಿಂದ ಕಾಣಬೇಕು. ಅವುಗಳಿಗೂ ಒಂದು ಜೀವವಿದೆ ಎಂಬುದನ್ನು ಯಾರೂ ಮರೆಯಬಾರದು. ನಿನ್ನೆಯ ದಿನ ಅಮಾನವೀಯ ಘಟನೆ ಇದಕ್ಕೆ ಸಾಕ್ಷಿ . ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಸಮೀಪದ ನೂಲ್ವಿ ಗ್ರಾಮದಿಂದ ಅದರಗುಂಚಿ ಗ್ರಾಮಕ್ಕೆ ಬರುವ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ಒಂದು ಎಮ್ಮೆ ಕರುವಿಗೆ ಡಿಕ್ಕಿ ಹೊಡೆದು ಅಪಘಾತವಾಗಿತ್ತು.

ನೂಲ್ವಿ ಗ್ರಾಮದ ಮಂಜುನಾಥ ಎಂಬ ರೈತ ಸುಮಾರು ಐದು ಆರು ಎಮ್ಮೆಗಳನ್ನು ಹುಲ್ಲು ಮೇಯಿಸಿಕೊಂಡು ಮರಳಿ ಮನೆಗೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ಇಂತ ಸಂದರ್ಭದಲ್ಲಿ ಮನುಷ್ಯನಿಗೆ ಏನಾದರೂ ಈ ಘಟನೆ ಆದರೆ ಅದನ್ನು ಅವನು ತೋರಿಸಿಕೊಳ್ಳುತ್ತಾನೆ ಅಥವಾ ಹೇಳಿಕೊಳ್ಳುತ್ತಾನೆ ರೈತನಿಗೆ ಆಧಾರವಾದ ಜಾನುವಾರುಗಳಿಗೆ ಆದರೇ ಅವುಗಳು ಏನು ಮಾಡಬೇಕು ಇದಕ್ಕೆಲ್ಲ ಯಾರೂ ಹೊಣೆ……??

ಘಟನೆ ಸಂಭವಿಸಿದ ನಂತರ ಸಲ್ಪ ಸಮಯ ಹೊತ್ತು ಕರು ರಸ್ತೆಯ ಮದ್ಯ ಭಾಗದಲ್ಲಿ ಬಿದ್ದಿರುವ ಕಾರಣ ಸಾರಿಗೆ ವಾಹನ ಮತ್ತು ಇತರೆ ವಾಹನ ಓಡಾಟಕ್ಕೆ ಅಡೆತಡೆಯಾಗಿತ್ತು ರಸ್ತೆ ಮದ್ಯ ಭಾಗದಲ್ಲಿ ಬಿದ್ದಿರುವ ಕರುವಿಗೆ ಕಾಲಿನ ಮೂಳೆ ಮುರಿದು. ಕರುವಿನ ಹೃದಯ ಭಾಗ, ತಲೆಗೆ ಮತ್ತು ಬೆನ್ನಿನ ದೊಡ್ಡ ಮೂಳೆಗೆ ಬಲವಾಗಿ ಪೆಟ್ಟು ಬಿದ್ದಿತ್ತು .

ನಂತರ ಭ್ರಷ್ಟರ ಬೇಟೆ ಪತ್ರಿಕೆ ವರದಿಗಾರರು ಮತ್ತು ಸ್ಥಳೀಯ ಗ್ರಾಮಸ್ಥರು ಸೇರಿ ಸ್ಥಳೀಯ ಪಶು ವೈದ್ಯಾಧಿಕಾರಿಗೆ ಹಾಗೂ ತುರ್ತು ಸೇವೆ 112 ಪೊಲೀಸ್ ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿ ಅಧಿಕಾರಿಗಳು ಬರುವ ವರೆಗೆ ತಡೆದು ಉದ್ವಿಗ್ನಗೋಳ್ಳುತ್ತಿದ್ದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದೆವು. ಕರುಗೆ ತೀವ್ರ ಪೆಟ್ಟು ಬಿದ್ದಿದ್ದ ಕಾರಣ ಸಾವು ಬದುಕಿನ ಮಧ್ಯೆ ಹೋರಾಡುತ್ತಿತ್ತು ಇದನ್ನು ಗಮನಿಸಿ ವಾಹನ ಮಾಲೀಕನ ಬಳಿ ಗ್ರಾಮಸ್ಥರು ಮಾತನಾಡಿ ರೈತನಿಗೆ 11,000 ಹಣವನ್ನು ಕೊಡಿಸುವ ಮೂಲಕ ನಷ್ಟವನ್ನು ಬರಿಸಿದ್ದಾರೆ.

ನಾವು ಸ್ಥಳೀಯರಿಂದ ಪಡೆದ ಮಾಹಿತಿ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ ಆದರೂ ಸುಮಾರು ಎರಡೂ ದಿನಕ್ಕೆ ಒಂದರಂತೆ ಅಪಘಾತ ಇಲ್ಲಿ ಸಂಭವಿಸುತ್ತದೆ. ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಉತ್ತಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡುತ್ತಾರಾ ಕಾದು ನೋಡಬೇಕಾಗಿದೆ. ಎಂದು ತಿಳಿಸಿದ್ದಾರೆ.
ವರದಿ: ಶ್ರೀಪಾದ್ ಹೆಗಡೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago