Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago