Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago