Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago