Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago