Latest

ಪೊಲೀಸರೇ ಪೊಲೀಸರನ್ನು ಬಂದಿಸಿರುವ ಇಂಟರೆಸ್ಟಿಂಗ್ ಸ್ಟೋರಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕದ ಮಧ್ಯಭಾಗದಲ್ಲಿರುವ ಛೋಟಾ ಮುಂಬೈ ಎಂದು ಹೆಸರು ಪಡೆದಿರುವ ಹುಬ್ಬಳ್ಳಿಯಲ್ಲಿ ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಪ್ಪು ಮಾಡಿದ್ದು ನಿಜಕ್ಕೂ ಬೇಸರವಾಗುತ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಶ್ರೀ ಲಾಭೂರಾಮ್ ರವರು ಹಗಲು ರಾತ್ರಿ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪಾತ್ರರಾಗಿದ್ದರೂ ಕೂಡಾ ಇಂತಹ ಒಂದು ಘಟನೆ ನಡೆಯಬಾರದಾಗಿತ್ತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಅದೂ ಯಾರೂ ನೋಡಿಲ್ಲ ಎಂಬ ಮಾತಿನಂತೆ ಪೊಲೀಸರೇ ಇಸ್ಪಿಟ್ ಆಟ ಆಡಿದರೆ ಏನೂ ಗತಿ.??
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅಕ್ಷಯ್ ಕಾಲೋನಿಯ ಮನೆಯೊಂದರಲ್ಲಿ 5 ಜನ ಪೋಲೀಸರು ಎಕ್ಕಾ ರಾಜಾ ರಾಣಿ ನನ್ನ ಕೈ ಒಳಗೆ ಎಂದರೇ ಏನ್ ಇದೂ.
ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯ ಖಡಕ್ ಪೊಲೀಸ್ ಅಧಿಕಾರಿ ( ಸಿಪಿಐ ) ಜೆ ಎಂ ಕಾಲಿಮೀರ್ಚಿ ಅವರಿಗೆ ಹೇಗೊ ಏನೊ ಒಂದು ಮಾಹಿತಿ ಬಂದಿರುತ್ತದೆ ತಕ್ಷಣ ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ನೋಡಿದರೆ ಅಲ್ಲಿ ಏನಪ್ಪಾ ಇದು ಎಂಬ ಪರಿಸ್ಥಿತಿ ಉಂಟಾಗಿದೆ

ಶಿಸ್ತು ನಿಯಮ ಪಾಲಿಸಬೇಕಾದ ಪೊಲೀಸರೇ ತಮ್ಮ ಜವಾಬ್ದಾರಿಗಳನ್ನು ಮರೆತು ಜೂಜಾಟದಲ್ಲಿ ತೊಡಗಿದ್ದರು ಆ 5 ಜನ ತಂಡದಲ್ಲಿದ್ದವರು ಪೊಲೀಸರೇ.
ನಗರ ಸಶಸ್ತ್ರ ಮೀಸಲು ಪಡೆಯ ಒಬ್ಬ ಇನ್ಸಪೆಕ್ಟರ್ ಇಬ್ಬರು ಹೆಡ್ ಕಾನ್ಸ್ ಟೇಬಲ್ ಒಬ್ಬ ಕಾನ್ಸ್ ಟೇಬಲ್ ಹಾಗೂ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಈ ಖತರ್ನಾಕ್ 5 ಜನರು ಗೋಕುಲ್ ರೋಡ್ ಅಕ್ಷಯ ಕಾಲೋನಿಯಲ್ಲಿರುವ ನಂ 337 ರ ಮನೆಯಲ್ಲಿ ತಮ್ಮ ಬಯಕೆಗಳ ಪ್ರಕಾರ ಇಸ್ಪೀಟ್ ಅಡ್ಡೆ ಮಾಡಿಕೊಂಡು ಆಡುತ್ತಿರುವಾಗ ಕಾಲಿಮಿರ್ಚೀ ಸಾಹೇಬರ ತಂಡದವರು 4 ಜನ ಜೂಜುಕೋರರನ್ನೂ ಬಂಧಿಸಿದ್ದಾರೆ
ಸಿಎಆರ್ ನ ಇಬ್ಬರು ಕಾನ್ಸ್ ಟೇಬಲ್ ಒಬ್ಬ ನಿವೃತ್ತ ಕಾನ್ಸ್ ಟೇಬಲ್ ಹಾಗೂ ಸಂಚಾರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಒಬ್ಬ ಕಾನ್ಸ್ ಟೇಬಲ್ ಈ ನಾಲ್ವರು ಬಂಧಿತರು ಇನ್ನೂ ಸಿಎಆರ್ ನ ಒಬ್ಬ ಇನ್ಸಪೆಕ್ಟರ್ ದಾಳಿ ನಡೆಸಿದಾಗ ತನ್ನ ಖತರ್ನಾಕ್ ಬುದ್ದಿವಂತಿಕೆಯಿಂದ ಪರಾರಿಯಾಗಿದ್ದಾನೆ ಈ ದಾಳಿಯಲ್ಲಿ ಒಟ್ಟು 9 ಸಾವಿರ ಹಣ ಮತ್ತು 5 ಮೊಬೈಲ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಅಲ್ಲದೇ ಕಾಲಿಮಿರ್ಚೀ ಸಾಹೇಬರು ಪರಾರಿಯಾದ ಸಿಎಆರ್ ಇನ್ಸಪೆಕ್ಟರ್ ನನ್ನು ಬಿಡಲ್ಲ ಅವನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸುತ್ತೇನೆ ಎಂದು ಹೇಳಿ ಕಾನೂನು ಕ್ರಮ ಜರುಗಿಸಿದ್ದಾರೆ

ವರದಿ : ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

6 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

6 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

6 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

6 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

6 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

11 hours ago