ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಅರುಣ ಹಾಗೂ ದೊಡ್ಡಯ್ಯ, ದೇವರಾಜು ಅವರ ನಡುವೆ ಭಾನುವಾರ ಸಂಜೆ ಗ್ರಾಮದಲ್ಲಿ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ ಕಾರಣ ಅರುಣನ ಮುಖ ಮತ್ತು ಇತರ ಕಡೆಗಳಿಗೆ ದೇವರಾಜು ಮತ್ತು ದೊಡ್ಡಯ್ಯ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಅರುಣನ ಮುಖ, ಕೈಕಾಲುಗಳಿಗೆ ಗಾಯಗಳಾಗಿದ್ದವು. ಮೂಗಿನಿಂದ ರಕ್ತ ಸೋರುತ್ತಿತ್ತು. ಬಳಿಕ ಆತ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಬೈಕ್ನಲ್ಲಿ ಹೋಗುತ್ತಿದ್ದ.
ಬೈಕ್ನಲ್ಲಿ ಹೋಗುತ್ತಿದ್ದ ಅರುಣನನ್ನು ಹಿಂಬಾಲಿಸಿದ ದೊಡ್ಡಯ್ಯ ಹಾಗೂ ದೇವರಾಜು ಅವರು, ಎತ್ತಿನ ಗಾಡಿಯ ಚಕ್ರಕ್ಕೆ ಸಿಲುಕಿಸುವ ಕೊಂಡಿಯಿಂದ ಅರುಣನ ಮೇಲೆ ಹಲ್ಲೆ ನಡೆಸಿದರು. ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿ ಕುಸಿದುಬಿದ್ದಿದ್ದ. ತಕ್ಷಣ ಸಾರ್ವಜನಿಕರು ಆತನನ್ನು ಭಾರತೀಗರದ ಜಿ. ಮಾದೇಗೌಡ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅರುಣ ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಸೂರತ್ (ಗುಜರಾತ್): ಒಂದು ಸಣ್ಣ ಅನುಮಾನ ಹೇಗೆ ವರ್ಷಗಳ ಕಾಲ ಸುಖವಾಗಿದ್ದ ಸಂಸಾರವನ್ನೇ ನಾಶಮಾಡಬಹುದು ಎಂಬುದಕ್ಕೆ ಗುಜರಾತ್ನ ಸೂರತ್ನಲ್ಲಿ ನಡೆದ…
ಹೈದರಾಬಾದ್: ನಗರದಲ್ಲಿ ಮಹಿಳೆಯರ ಭದ್ರತೆ ಪ್ರಶ್ನೆಯಾಗಿ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಜನನಿಬಿಡ ಪ್ರದೇಶದಲ್ಲೇ ಜಾಗಿಂಗ್ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ…
ಹಾಸನ: ತಿಂಡಿ ಖರೀದಿಸಿ ಹಣ ನೀಡದೆ ತೆರಳುತ್ತಿದ್ದವರನ್ನು ಪ್ರಶ್ನಿಸಿದ ಕಾರಣಕ್ಕೆ ಬೇಕರಿ ಮಾಲೀಕನ ಮೇಲೆ ದಾಳಿಯ ಘಟನೆ ಹಾಸನ ಜಿಲ್ಲೆಯ…
ಭಟ್ಕಳ: ಇಂದಿನ ಕಾಲದಲ್ಲಿ ಪ್ರಾಮಾಣಿಕತೆ ಅಪರೂಪವಾಗುತ್ತಿದೆ ಎನ್ನುವ ಮಾತಿನ ನಡುವೆ, ಭಟ್ಕಳದ ಆಟೋರಿಕ್ಷಾ ಚಾಲಕರೊಬ್ಬರು ತಮ್ಮ ನಿಸ್ವಾರ್ಥ ನಡೆ ಮೂಲಕ…
ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ಮೂಡಿಸುವ ಘಟನೆ ಬೆಳಕಿಗೆ ಬಂದಿದ್ದು, ಆಡುಗೋಡಿ ಪ್ರದೇಶದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು…
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…