Latest

ಅನಾಸ್ಥೇಷಿಯಾ ದೋಷ: ಕೇವಲ ಕಿವಿ ಚುಚ್ಚಿಸೋಕೆ ಹೋಗಿ 6 ತಿಂಗಳ ಶಿಶುವಿನ ದಾರುಣ ಸಾವು!

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ವೈದ್ಯನ ಅಜಾಗರೂಕತೆಯಿಂದ ಆರು ತಿಂಗಳ ಹಸುಗೂಸು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಕೇವಲ ಕಿವಿ ಚುಚ್ಚಿಸೋಕೆ ಆಸ್ಪತ್ರೆಗೆ ಬಂದಿದ್ದ ಪುಟ್ಟ ಕಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾದ ಅನಿರೀಕ್ಷಿತ ದುರಂತ ಪೋಷಕರನ್ನು ಆಘಾತಕ್ಕೀಡು ಮಾಡಿದೆ.

ಅನಾಸ್ಥೇಷಿಯಾ ಸ್ಪಂದನೆ: ಕ್ಷಣಾರ್ಧದಲ್ಲಿ ಆಘಾತ

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಮಗುವಾದ ಪ್ರಖ್ಯಾತ್‌ಗೆ ಕಿವಿ ಚುಚ್ಚಿಸೋ ಕಾರ್ಯ ಮಾಡಿಸಬೇಕೆಂಬ ಉದ್ದೇಶದೊಂದಿಗೆ ಪೋಷಕರು ಬೊಮ್ಮಲಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಮಗು ತುಂಬಾ ಚಿಕ್ಕದಾದ ಕಾರಣ ನೋವಿನಿಂದ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವೈದ್ಯನು ಬೆಂಟ್ ಇಂಜೆಕ್ಷನ್ (ಅನಾಸ್ಥೇಷಿಯಾ) ನೀಡಿದನು. ಆದರೆ ಇಂಜೆಕ್ಷನ್ ನೀಡಿದ ಕೆಲವೇ ನಿಮಿಷಗಳಲ್ಲಿ ಮಗುವಿಗೆ ತೀವ್ರ ಪ್ರತಿಕ್ರಿಯೆ (ಆಲರ್ಜಿಕ್ ರಿಯಾಕ್ಷನ್) ಆಗಿದ್ದು, ತಕ್ಷಣವೇ ಕೈಕಾಲು ಜಡವಾಗುವ ಲಕ್ಷಣಗಳು ಗೋಚರಿಸಿವೆ.

ತಕ್ಷಣದ ಚಿಕಿತ್ಸೆಯ ಯತ್ನ ವಿಫಲ

ಸ್ಥಳದಲ್ಲೇ ಮಗುವಿನ ಆರೋಗ್ಯ ಹದಗೆಡುತ್ತಿದಂತೆಯೇ ವೈದ್ಯರು ತಕ್ಷಣವೇ ಅದನ್ನು ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ರವಾನಿಸಿದರು. ಆದರೆ ದುರದೃಷ್ಟವಶಾತ್, ಆಸ್ಪತ್ರೆ ತಲುಪುವ ಮುನ್ನವೇ ಮಗು ಉಸಿರು ನಿಲ್ಲಿಸಿತು. ಈ ಘಟನೆಯಿಂದ ಪೋಷಕರು ಮತ್ತು ಸಂಬಂಧಿಕರು ಆಕ್ರೋಶಗೊಂಡಿದ್ದು, ವೈದ್ಯನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ ಎಂದು ಆರೋಪಿಸಿದರು.

ಆಕ್ರೋಶ ಹಾಗೂ ಆಸ್ಪತ್ರೆಯಲ್ಲಿ ಗಲಾಟೆ

ಮಗುವಿನ ಸಾವಿನಿಂದ ಪೋಷಕರು ಮತ್ತು ಗ್ರಾಮಸ್ಥರು ಕೋಪಗೊಂಡು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಅಧಿಕಾರಿಗಳು ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಪ್ರವೇಶಿಸಲು ನಿರ್ಬಂಧಿಸಿ, ಬಾಗಿಲು ಹಾಕಿ ಸಭೆ ನಡೆಸಿದ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು. ಪ್ರತಿಭಟನಾಕಾರರು ಮಾಧ್ಯಮವನ್ನು ಒಳಬಿಡಬೇಕು ಎಂದು ಒತ್ತಾಯಿಸಿದ ನಂತರವೇ ಪೊಲೀಸರ ಹಸ್ತಕ್ಷೇಪದಿಂದ ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಬಿಡಲಾಯಿತು.

ಪೊಲೀಸರ ತನಿಖೆ ಮತ್ತು ವೈದ್ಯಕೀಯ ವರದಿ ನಿರೀಕ್ಷೆ

ಈ ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ನೀಡಿದ್ದು, ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಅಲಂಪಾಷಾ, “ಘಟನೆಯ ಕುರಿತು ತನಿಖೆ ನಡೆಸಲಾಗುತ್ತದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಕೇವಲ ಕಿವಿ ಚುಚ್ಚಿಸೋಕೆ ಹೋಗಿದ್ದ ಮಗುವಿನ ಕರಾಳ ಅಂತ್ಯ

ನೋವು ತಪ್ಪಿಸಲು ನೀಡಿದ ಎಂಜೆಕ್ಷನ್ ಬದುಕನ್ನೇ ಕಿತ್ತುಕೊಂಡ ದುರ್ಘಟನೆ ಪೋಷಕರಿಗೆ ತಾಳಲಾರಾದ ಆಘಾತ ತಂದಿದೆ. ಈ ಪ್ರಕರಣದ ತನಿಖೆಯಿಂದ ನಿಜನಿಜಾಂತರ ಬೆಳಕಿಗೆ ಬರಬೇಕಾದ್ದು ಮಾತ್ರವಲ್ಲ, ಇಂತಹ ದುರಂತಗಳು ಪುನರಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago