Latest

ಅಂಗನವಾಡಿ ಸಹಾಯಕಿಯಿಂದ ಬಾಲಕಿಗೆ ಹಲ್ಲೆ: ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಅಂಗನವಾಡಿ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಗುಲಗಾಲಜಂಬಗಿ ಗ್ರಾಮದ ವಾರ್ಡ್ ಸಂಖ್ಯೆ 2ರ ಅಂಗನವಾಡಿಯಲ್ಲಿ ಸಹಾಯಕಿ ಅಮಾನುಷ ವರ್ತನೆ ಮೆರೆದಿದ್ದು, ಪುಟ್ಟ ಬಾಲಕಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಚಿಕ್ಕ ಕಾರಣಕ್ಕೆ ಹಲ್ಲೆ:

ಪ್ರೀತಿ ಎಂಬ ಪುಟ್ಟ ಬಾಲಕಿ ಎಂದಿನಂತೆ ಅಂಗನವಾಡಿಗೆ ಹಾಜರಾದಳು. ಆದರೆ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿ ಶಾರವ್ವ ಪಂಚಗಾವಿ, ಅನ್ನದ ಚಮಚದಿಂದ ಬಾಲಕಿಯ ಕೆನ್ನೆ ಮೇಲೆ ಬರೆ ಎಳೆಯುವ ಅಮಾನುಷ ಕೃತ್ಯವೆಸಗಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಸ್ಥಳೀಯರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣದ ಕ್ರಮ:

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ (CDPO) ಕಾಶಿಬಾಯಿ ಕೋರೆಗೋಳ, ಅಂಗನವಾಡಿ ಕಾರ್ಯಕರ್ತೆ ಶೋಭಾ ಹೊಳೆಪ್ಪನವರ ಮತ್ತು ಸಹಾಯಕಿ ಶಾರವ್ವ ಪಂಚಗಾವಿಯನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಅಲ್ಲದೆ, ಆ ಅಂಗನವಾಡಿಯಲ್ಲಿ ಬೇರೊಬ್ಬರನ್ನು ನೇಮಕ ಮಾಡುವಂತೆ ಆದೇಶ ನೀಡಿದ್ದಾರೆ.

ಆರೋಗ್ಯ ಸ್ಥಿತಿ ಮತ್ತು ಮುಂದಿನ ಕ್ರಮ:

ಬಾಲಕಿಗೆ ತಕ್ಷಣವೇ ಚಿಕಿತ್ಸೆಗಾಗಿ ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಹಿನ್ನಲೆಯಲ್ಲಿ, ಸ್ಥಳೀಯರು ಘಟನೆಯ ವಿರುದ್ಧ ಗಂಭೀರವಾಗಿ ಪ್ರತಿಕ್ರಿಯಿಸಿ, ಸಕಾಲಿಕ ಕ್ರಮ ಕೈಗೊಳ್ಳುವಂತೆ ಬೇಡಿಕೆ ಇಟ್ಟಿದ್ದಾರೆ.

ಈ ಘಟನೆಯು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ಆಡಳಿತ ವ್ಯವಸ್ಥೆ ಕುರಿತು ಹಲವಾರು ಪ್ರಶ್ನೆಗಳನ್ನೆದ್ದಿದೆ. ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಮಕ್ಕಳ ಮೇಲಿನ ಹಲ್ಲೆ ಪ್ರಕರಣಗಳಿಗೆ ಕಡಿವಾಣ ಹಾಕಬೇಕಾಗಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago