Latest

ಪ್ರೀತಿ ನಿರಾಕರಣೆಗೆ ಕೋಪ: ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಯುವಕ !

ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಹುಜೂರ್‌ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಚರ್ಚೆಗೆ ಗ್ರಾಸವಾಗಿದೆ. ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ, ಸಾರ್ವಜನಿಕವಾಗಿ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನತೆಯಲ್ಲಿ ಕಿಡಿಕಾರಿಸುವಂತಾಗಿದೆ.

ಘಟನೆಯ ವಿವರ

23 ವರ್ಷದ ಯುವತಿಯೊಬ್ಬಳು ತನ್ನ ಚಿಕ್ಕಪ್ಪನೊಂದಿಗೆ ಹುಜೂರ್‌ನಗರದಲ್ಲಿ ವಾಸವಿದ್ದಳು. ಆರೋಪಿಯಾದ ಸುಂದರ್ ಪ್ರಮೋದ್ ಎಂಬ ಯುವಕ, ಆಕೆಯನ್ನು ಪ್ರೀತಿಸುತ್ತಿದ್ದನು. ಆದರೆ, ಯುವತಿಯು ಆತನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಇದರಿಂದ ಕೋಪಗೊಂಡ ಪ್ರಮೋದ್, ಅದೇ ಪ್ರದೇಶದ ರಸ್ತೆಯೊಂದರಲ್ಲಿ ಯುವತಿಯ ಬಳಿ ಬಂದು, ಪೆಟ್ರೋಲ್ ತುಂಬಿದ ಬಾಟಲಿಯನ್ನು ಹಿಡಿದು ಬೆದರಿಸಲು ಆರಂಭಿಸಿದ್ದಾನೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳ ಪ್ರಕಾರ, ಆತ ಬುರ್ಖಾ ಧರಿಸಿದ್ದ ಯುವತಿಯೊಬ್ಬಳ ಮೇಲೆ ಪೆಟ್ರೋಲ್ ಸುರಿದಿದ್ದು, ಅಲ್ಲದೆ ತನ್ನ ಮೇಲೂ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡುವ ನಾಟಕವನ್ನೂ ಮಾಡುತ್ತಿದ್ದ. ಈ ವೇಳೆ, ಒಬ್ಬ ದಾರಿಹೋಕನು ವಿಷಯವನ್ನು ಗಮನಿಸಿ ತಕ್ಷಣ ಹಸ್ತಕ್ಷೇಪ ಮಾಡಿದ. ಆತ ಯುವಕನನ್ನು ಯುವತಿಯರಿಂದ ದೂರ ತಳ್ಳಿದ , ಆತನಿಗೆ ಕಪಾಳಮೋಕ್ಷವೂ ಮಾಡಿದ್ದಾನೆ.

ಪೊಲೀಸರ ಕ್ರಮ

ಘಟನೆಯ ನಂತರ, ಸಂತ್ರಸ್ತೆ ಯುವತಿ ತಕ್ಷಣವೇ ಹುಜೂರ್‌ನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಸುಂದರ್ ಪ್ರಮೋದ್ ವಿರುದ್ಧ ಹತ್ಯೆಗೆ ಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಸಾಮಾಜಿಕ ಪ್ರತಿಕ್ರಿಯೆ

ಈ ಘಟನೆ ಹರಡಿದ್ದು, ಜನರು ಯುವತಿಯ ಸಾಥ್ ನೀಡುತ್ತಿದ್ದಾರೆ. ಮಹಿಳಾ ಸುರಕ್ಷತೆ ಹಾಗೂ ಪ್ರೀತಿಯ ಹೆಸರಿನಲ್ಲಿ ನಡೆಯುವ ಗಲಾಟೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸುತ್ತಿದ್ದಾರೆ.

ಇಂತಹ ಘಟನೆಗಳು ಮತ್ತೆ ನಡೆಯದಂತೆ ಕಾನೂನಿನ ಕಠಿಣ ಕ್ರಮ ಅಗತ್ಯವಾಗಿದೆ ಎಂಬ ಅಭಿಪ್ರಾಯ ಸಾಮಾಜಿಕ ವಲಯದಲ್ಲಿ ವ್ಯಕ್ತವಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago