ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಹುಜೂರ್ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಚರ್ಚೆಗೆ ಗ್ರಾಸವಾಗಿದೆ. ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ, ಸಾರ್ವಜನಿಕವಾಗಿ ಯುವತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನತೆಯಲ್ಲಿ ಕಿಡಿಕಾರಿಸುವಂತಾಗಿದೆ.
ಘಟನೆಯ ವಿವರ
23 ವರ್ಷದ ಯುವತಿಯೊಬ್ಬಳು ತನ್ನ ಚಿಕ್ಕಪ್ಪನೊಂದಿಗೆ ಹುಜೂರ್ನಗರದಲ್ಲಿ ವಾಸವಿದ್ದಳು. ಆರೋಪಿಯಾದ ಸುಂದರ್ ಪ್ರಮೋದ್ ಎಂಬ ಯುವಕ, ಆಕೆಯನ್ನು ಪ್ರೀತಿಸುತ್ತಿದ್ದನು. ಆದರೆ, ಯುವತಿಯು ಆತನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಇದರಿಂದ ಕೋಪಗೊಂಡ ಪ್ರಮೋದ್, ಅದೇ ಪ್ರದೇಶದ ರಸ್ತೆಯೊಂದರಲ್ಲಿ ಯುವತಿಯ ಬಳಿ ಬಂದು, ಪೆಟ್ರೋಲ್ ತುಂಬಿದ ಬಾಟಲಿಯನ್ನು ಹಿಡಿದು ಬೆದರಿಸಲು ಆರಂಭಿಸಿದ್ದಾನೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳ ಪ್ರಕಾರ, ಆತ ಬುರ್ಖಾ ಧರಿಸಿದ್ದ ಯುವತಿಯೊಬ್ಬಳ ಮೇಲೆ ಪೆಟ್ರೋಲ್ ಸುರಿದಿದ್ದು, ಅಲ್ಲದೆ ತನ್ನ ಮೇಲೂ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡುವ ನಾಟಕವನ್ನೂ ಮಾಡುತ್ತಿದ್ದ. ಈ ವೇಳೆ, ಒಬ್ಬ ದಾರಿಹೋಕನು ವಿಷಯವನ್ನು ಗಮನಿಸಿ ತಕ್ಷಣ ಹಸ್ತಕ್ಷೇಪ ಮಾಡಿದ. ಆತ ಯುವಕನನ್ನು ಯುವತಿಯರಿಂದ ದೂರ ತಳ್ಳಿದ , ಆತನಿಗೆ ಕಪಾಳಮೋಕ್ಷವೂ ಮಾಡಿದ್ದಾನೆ.
ಪೊಲೀಸರ ಕ್ರಮ
ಘಟನೆಯ ನಂತರ, ಸಂತ್ರಸ್ತೆ ಯುವತಿ ತಕ್ಷಣವೇ ಹುಜೂರ್ನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಸುಂದರ್ ಪ್ರಮೋದ್ ವಿರುದ್ಧ ಹತ್ಯೆಗೆ ಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಸಾಮಾಜಿಕ ಪ್ರತಿಕ್ರಿಯೆ
ಈ ಘಟನೆ ಹರಡಿದ್ದು, ಜನರು ಯುವತಿಯ ಸಾಥ್ ನೀಡುತ್ತಿದ್ದಾರೆ. ಮಹಿಳಾ ಸುರಕ್ಷತೆ ಹಾಗೂ ಪ್ರೀತಿಯ ಹೆಸರಿನಲ್ಲಿ ನಡೆಯುವ ಗಲಾಟೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸುತ್ತಿದ್ದಾರೆ.
ಇಂತಹ ಘಟನೆಗಳು ಮತ್ತೆ ನಡೆಯದಂತೆ ಕಾನೂನಿನ ಕಠಿಣ ಕ್ರಮ ಅಗತ್ಯವಾಗಿದೆ ಎಂಬ ಅಭಿಪ್ರಾಯ ಸಾಮಾಜಿಕ ವಲಯದಲ್ಲಿ ವ್ಯಕ್ತವಾಗಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…