Categories: Latest

ಆಟೋ ಡಿಕ್ಕಿಗೆ ಕೋಪಗೊಂಡ ಮಹಿಳೆ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ..

ಬೆಂಗಳೂರು: ಟ್ರಾಫಿಕ್ ಜಾಮ್‌ನ ಮಧ್ಯೆ ನಡೆದ ಸಣ್ಣ ಅಪಘಾತದಿಂದ ಉದ್ಭವಿಸಿದ ಗಲಾಟೆ ದೊಡ್ಡ ಹಂಗಾಮಿಗೆ ಕಾರಣವಾಗಿದೆ. ಬೆಳ್ಳಂದೂರು ವೃತ್ತದಲ್ಲಿ ನಡೆದ ಈ ಘಟನೆಯಲ್ಲಿ ಬಿಹಾರ ಮೂಲದ ಪನ್ಪೂರಿ ಮಿಶ್ರಾ (28) ಎಂಬ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅಸಭ್ಯವಾಗಿ ವರ್ತಿಸಿದ್ದಾಳೆ. ಘಟನೆಯ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ವಿವರಗಳ ಪ್ರಕಾರ, ಗರ್ಭಿಣಿಯಾಗಿರುವ ಪನ್ಪೂರಿ ಮಿಶ್ರಾ ಸ್ಕೂಟಿಯಲ್ಲಿ ಆಸ್ಪತ್ರೆ ಕಡೆಗೆ ತೆರಳುತ್ತಿದ್ದ ಸಂದರ್ಭ, ಟ್ರಾಫಿಕ್‌ನಲ್ಲಿದ್ದಾಗ ಹಿಂದಿನಿಂದ ಒಂದು ಆಟೋ ಸ್ಕೂಟಿಗೆ ತುಳಿದಿದೆ. ಇದರಿಂದ ಕೋಪಗೊಂಡ ಮಹಿಳೆ ಆಟೋ ಚಾಲಕನೊಂದಿಗೆ ವಾದವಾಡಲು ಆರಂಭಿಸಿದಳು. ಮಾತಿಗೆ ಮಾತು ಬೆಳೆದು ಜಗಳ ಉಲ್ಬಣಗೊಂಡು, ಮಹಿಳೆ ತನ್ನ ಚಪ್ಪಲಿಯಿಂದ ಆಟೋ ಚಾಲಕನಿಗೆ ಹೊಡೆದಿದ್ದಾಳೆ.

ಘಟನೆಯ ವಿಡಿಯೋ ಕೂಡಲೇ  ಹರಡಿದ್ದು, ಇದನ್ನು ಕಂಡ ಅನೇಕರು ಮಹಿಳೆಯ ದುರ್ವ್ಯವಹಾರವನ್ನು ಖಂಡಿಸಿದ್ದಾರೆ. ಮಹಿಳೆ ಎಂದು ಸಹಾನುಭೂತಿ ವ್ಯಕ್ತಪಡಿಸಿದರೂ, ಇತರರು ಸಾರ್ವಜನಿಕವಾಗಿ ಹೀಗೆ ವರ್ತಿಸುವುದು ನ್ಯಾಯವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪನ್ಪೂರಿ ಮಿಶ್ರಾ ಅವರನ್ನು ಪೊಲೀಸರು ವಿಚಾರಣೆಗಾಗಿ ಕರೆಸಿ ವಿವರಗಳನ್ನು ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ, “ಕೋಪದಿಂದ ಹೀಗೆ ವರ್ತಿಸಿದೆ,” ಎಂದು ಒಪ್ಪಿಕೊಂಡಿದ್ದಾಳೆ.

nazeer ahamad

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

19 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

20 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

21 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

22 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

23 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

1 day ago