Categories: Latest

ಆಟೋ ಡಿಕ್ಕಿಗೆ ಕೋಪಗೊಂಡ ಮಹಿಳೆ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ..

ಬೆಂಗಳೂರು: ಟ್ರಾಫಿಕ್ ಜಾಮ್‌ನ ಮಧ್ಯೆ ನಡೆದ ಸಣ್ಣ ಅಪಘಾತದಿಂದ ಉದ್ಭವಿಸಿದ ಗಲಾಟೆ ದೊಡ್ಡ ಹಂಗಾಮಿಗೆ ಕಾರಣವಾಗಿದೆ. ಬೆಳ್ಳಂದೂರು ವೃತ್ತದಲ್ಲಿ ನಡೆದ ಈ ಘಟನೆಯಲ್ಲಿ ಬಿಹಾರ ಮೂಲದ ಪನ್ಪೂರಿ ಮಿಶ್ರಾ (28) ಎಂಬ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅಸಭ್ಯವಾಗಿ ವರ್ತಿಸಿದ್ದಾಳೆ. ಘಟನೆಯ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ವಿವರಗಳ ಪ್ರಕಾರ, ಗರ್ಭಿಣಿಯಾಗಿರುವ ಪನ್ಪೂರಿ ಮಿಶ್ರಾ ಸ್ಕೂಟಿಯಲ್ಲಿ ಆಸ್ಪತ್ರೆ ಕಡೆಗೆ ತೆರಳುತ್ತಿದ್ದ ಸಂದರ್ಭ, ಟ್ರಾಫಿಕ್‌ನಲ್ಲಿದ್ದಾಗ ಹಿಂದಿನಿಂದ ಒಂದು ಆಟೋ ಸ್ಕೂಟಿಗೆ ತುಳಿದಿದೆ. ಇದರಿಂದ ಕೋಪಗೊಂಡ ಮಹಿಳೆ ಆಟೋ ಚಾಲಕನೊಂದಿಗೆ ವಾದವಾಡಲು ಆರಂಭಿಸಿದಳು. ಮಾತಿಗೆ ಮಾತು ಬೆಳೆದು ಜಗಳ ಉಲ್ಬಣಗೊಂಡು, ಮಹಿಳೆ ತನ್ನ ಚಪ್ಪಲಿಯಿಂದ ಆಟೋ ಚಾಲಕನಿಗೆ ಹೊಡೆದಿದ್ದಾಳೆ.

ಘಟನೆಯ ವಿಡಿಯೋ ಕೂಡಲೇ  ಹರಡಿದ್ದು, ಇದನ್ನು ಕಂಡ ಅನೇಕರು ಮಹಿಳೆಯ ದುರ್ವ್ಯವಹಾರವನ್ನು ಖಂಡಿಸಿದ್ದಾರೆ. ಮಹಿಳೆ ಎಂದು ಸಹಾನುಭೂತಿ ವ್ಯಕ್ತಪಡಿಸಿದರೂ, ಇತರರು ಸಾರ್ವಜನಿಕವಾಗಿ ಹೀಗೆ ವರ್ತಿಸುವುದು ನ್ಯಾಯವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪನ್ಪೂರಿ ಮಿಶ್ರಾ ಅವರನ್ನು ಪೊಲೀಸರು ವಿಚಾರಣೆಗಾಗಿ ಕರೆಸಿ ವಿವರಗಳನ್ನು ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ, “ಕೋಪದಿಂದ ಹೀಗೆ ವರ್ತಿಸಿದೆ,” ಎಂದು ಒಪ್ಪಿಕೊಂಡಿದ್ದಾಳೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago