Categories: Latest

ಆಟೋ ಡಿಕ್ಕಿಗೆ ಕೋಪಗೊಂಡ ಮಹಿಳೆ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ..

ಬೆಂಗಳೂರು: ಟ್ರಾಫಿಕ್ ಜಾಮ್‌ನ ಮಧ್ಯೆ ನಡೆದ ಸಣ್ಣ ಅಪಘಾತದಿಂದ ಉದ್ಭವಿಸಿದ ಗಲಾಟೆ ದೊಡ್ಡ ಹಂಗಾಮಿಗೆ ಕಾರಣವಾಗಿದೆ. ಬೆಳ್ಳಂದೂರು ವೃತ್ತದಲ್ಲಿ ನಡೆದ ಈ ಘಟನೆಯಲ್ಲಿ ಬಿಹಾರ ಮೂಲದ ಪನ್ಪೂರಿ ಮಿಶ್ರಾ (28) ಎಂಬ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಅಸಭ್ಯವಾಗಿ ವರ್ತಿಸಿದ್ದಾಳೆ. ಘಟನೆಯ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ವಿವರಗಳ ಪ್ರಕಾರ, ಗರ್ಭಿಣಿಯಾಗಿರುವ ಪನ್ಪೂರಿ ಮಿಶ್ರಾ ಸ್ಕೂಟಿಯಲ್ಲಿ ಆಸ್ಪತ್ರೆ ಕಡೆಗೆ ತೆರಳುತ್ತಿದ್ದ ಸಂದರ್ಭ, ಟ್ರಾಫಿಕ್‌ನಲ್ಲಿದ್ದಾಗ ಹಿಂದಿನಿಂದ ಒಂದು ಆಟೋ ಸ್ಕೂಟಿಗೆ ತುಳಿದಿದೆ. ಇದರಿಂದ ಕೋಪಗೊಂಡ ಮಹಿಳೆ ಆಟೋ ಚಾಲಕನೊಂದಿಗೆ ವಾದವಾಡಲು ಆರಂಭಿಸಿದಳು. ಮಾತಿಗೆ ಮಾತು ಬೆಳೆದು ಜಗಳ ಉಲ್ಬಣಗೊಂಡು, ಮಹಿಳೆ ತನ್ನ ಚಪ್ಪಲಿಯಿಂದ ಆಟೋ ಚಾಲಕನಿಗೆ ಹೊಡೆದಿದ್ದಾಳೆ.

ಘಟನೆಯ ವಿಡಿಯೋ ಕೂಡಲೇ  ಹರಡಿದ್ದು, ಇದನ್ನು ಕಂಡ ಅನೇಕರು ಮಹಿಳೆಯ ದುರ್ವ್ಯವಹಾರವನ್ನು ಖಂಡಿಸಿದ್ದಾರೆ. ಮಹಿಳೆ ಎಂದು ಸಹಾನುಭೂತಿ ವ್ಯಕ್ತಪಡಿಸಿದರೂ, ಇತರರು ಸಾರ್ವಜನಿಕವಾಗಿ ಹೀಗೆ ವರ್ತಿಸುವುದು ನ್ಯಾಯವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪನ್ಪೂರಿ ಮಿಶ್ರಾ ಅವರನ್ನು ಪೊಲೀಸರು ವಿಚಾರಣೆಗಾಗಿ ಕರೆಸಿ ವಿವರಗಳನ್ನು ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಮಹಿಳೆ, “ಕೋಪದಿಂದ ಹೀಗೆ ವರ್ತಿಸಿದೆ,” ಎಂದು ಒಪ್ಪಿಕೊಂಡಿದ್ದಾಳೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago