Latest

ತಿರುವನಂತಪುರದಲ್ಲಿ ಪಶುಸಹಜ ಘಟನೆ: ಮದ್ಯದ ಅಮಲಿನಲ್ಲಿ ಮಗನಿಂದ ತಾಯಿಗೆ ಅಮಾನವೀಯ ಕೊಲೆ

ತಿರುವನಂತಪುರ: ತಾಯಿಯ ಮೇಲೆ ನಂಬಲಾರದ ಘಾತಕತೆಗೆ ಹೆಸರಾಗಿದೆ ತಿರುವನಂತಪುರದ ತೆಕ್ಕಡ ಪ್ರದೇಶ. ಇಲ್ಲಿ ಮದ್ಯದ ಅಮಲಿನಲ್ಲಿ ಮಗನೊಬ್ಬ ತಾಯಿಯನ್ನೇ ಕ್ರೂರವಾಗಿ ತುಳಿದು ಕೊಂದಿರುವ ಭೀಕರ ಘಟನೆ ನಡೆದಿದೆ.

ಮೃತ ದುರ್ದೈವಿ ಓಮನಾ (85), ತೆಕ್ಕಡ ನಿವಾಸಿಯಾಗಿದ್ದು, ಆರೋಪಿ ಆಕೆಯ ಪುತ್ರ ಮಣಿಕಂದನ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಮಣಿಕಂದನ್ ಸದಾ ಮದ್ಯ ಸೇವನೆಯಲ್ಲೇ ಮುಳುಗಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಸುಮಾರು 10:30ಕ್ಕೆ ಗರಿಷ್ಠ ಮದ್ಯ ಸೇವನೆ ಮಾಡಿಕೊಂಡು ಮನೆಗೆ ಬಂದಿದ್ದ ಮಣಿಕಂದನ್, ತಾಯಿ ಓಮನಾರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದ. ನಂತರ ಅಮಲಿನಲ್ಲಿಯೇ ತನ್ನ ತಾಯಿಯನ್ನು ಅಮಾನವೀಯವಾಗಿ ತಳ್ಳಿದ, ಒದಿದ ಹಾಗೂ ಕಾಲಿನಿಂದ ತುಳಿದಿದ್ದಾನೆ.

ಗಂಭೀರವಾಗಿ ಗಾಯಗೊಂಡ ಓಮನಾಳನ್ನು ಸ್ಥಳೀಯರು ತಕ್ಷಣವೇ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ವೈದ್ಯಕೀಯ ವರದಿಯ ಪ್ರಕಾರ ಮಣಿಕಂದನ್‌ನ ಹಿಂಸಾತ್ಮಕ ದಾಳಿಯಿಂದ ಓಮನಾಳ ಅನೇಕ ಮೂಳೆಗಳು ಮುರಿದಿದ್ದು, ಈ ಅವಸ್ಥೆಯೇ ಸಾವಿಗೆ ಕಾರಣವಾಗಿದೆಯೆಂದು ತಿಳಿದು ಬಂದಿದೆ.

ಘಟನೆಯ ಕುರಿತು ತಿರುವನಂತಪುರದ ವಟ್ಟಪ್ಪರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಣಿಕಂದನ್ ಈಗ ಪೊಲೀಸರು ಬಂಧನದಲ್ಲಿದ್ದಾರೆ. ತನಿಖೆ ಮುಂದುವರಿದಿದೆ.

 

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago