Latest

ತಿರುವನಂತಪುರದಲ್ಲಿ ಪಶುಸಹಜ ಘಟನೆ: ಮದ್ಯದ ಅಮಲಿನಲ್ಲಿ ಮಗನಿಂದ ತಾಯಿಗೆ ಅಮಾನವೀಯ ಕೊಲೆ

ತಿರುವನಂತಪುರ: ತಾಯಿಯ ಮೇಲೆ ನಂಬಲಾರದ ಘಾತಕತೆಗೆ ಹೆಸರಾಗಿದೆ ತಿರುವನಂತಪುರದ ತೆಕ್ಕಡ ಪ್ರದೇಶ. ಇಲ್ಲಿ ಮದ್ಯದ ಅಮಲಿನಲ್ಲಿ ಮಗನೊಬ್ಬ ತಾಯಿಯನ್ನೇ ಕ್ರೂರವಾಗಿ ತುಳಿದು ಕೊಂದಿರುವ ಭೀಕರ ಘಟನೆ ನಡೆದಿದೆ.

ಮೃತ ದುರ್ದೈವಿ ಓಮನಾ (85), ತೆಕ್ಕಡ ನಿವಾಸಿಯಾಗಿದ್ದು, ಆರೋಪಿ ಆಕೆಯ ಪುತ್ರ ಮಣಿಕಂದನ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಮಣಿಕಂದನ್ ಸದಾ ಮದ್ಯ ಸೇವನೆಯಲ್ಲೇ ಮುಳುಗಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಸುಮಾರು 10:30ಕ್ಕೆ ಗರಿಷ್ಠ ಮದ್ಯ ಸೇವನೆ ಮಾಡಿಕೊಂಡು ಮನೆಗೆ ಬಂದಿದ್ದ ಮಣಿಕಂದನ್, ತಾಯಿ ಓಮನಾರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದ. ನಂತರ ಅಮಲಿನಲ್ಲಿಯೇ ತನ್ನ ತಾಯಿಯನ್ನು ಅಮಾನವೀಯವಾಗಿ ತಳ್ಳಿದ, ಒದಿದ ಹಾಗೂ ಕಾಲಿನಿಂದ ತುಳಿದಿದ್ದಾನೆ.

ಗಂಭೀರವಾಗಿ ಗಾಯಗೊಂಡ ಓಮನಾಳನ್ನು ಸ್ಥಳೀಯರು ತಕ್ಷಣವೇ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ವೈದ್ಯಕೀಯ ವರದಿಯ ಪ್ರಕಾರ ಮಣಿಕಂದನ್‌ನ ಹಿಂಸಾತ್ಮಕ ದಾಳಿಯಿಂದ ಓಮನಾಳ ಅನೇಕ ಮೂಳೆಗಳು ಮುರಿದಿದ್ದು, ಈ ಅವಸ್ಥೆಯೇ ಸಾವಿಗೆ ಕಾರಣವಾಗಿದೆಯೆಂದು ತಿಳಿದು ಬಂದಿದೆ.

ಘಟನೆಯ ಕುರಿತು ತಿರುವನಂತಪುರದ ವಟ್ಟಪ್ಪರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಣಿಕಂದನ್ ಈಗ ಪೊಲೀಸರು ಬಂಧನದಲ್ಲಿದ್ದಾರೆ. ತನಿಖೆ ಮುಂದುವರಿದಿದೆ.

 

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

7 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

7 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

7 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

7 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago