Latest

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ ಎಂಬುವವರ ಕೈವಾಡವಿದೆ ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಅವರ ಕುಟುಂಬವನ್ನು ಸಂಪರ್ಕಿಸಿದ್ದು, ಈ ವೇಳೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ರಾಜೇಶ್ ಅವರ ತಾಯಿ ಭಾನು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, “ನನ್ನ ಮಗನಿಗೆ ನಾಯಿಗಳ ಮೇಲೆ ಅಪಾರ ಪ್ರೀತಿ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಬೀದಿ ನಾಯಿಗಳನ್ನು ಒಟ್ಟುಗೂಡಿಸಿ ಆಶ್ರಯ ಕೇಂದ್ರಗಳಿಗೆ ಕಳುಹಿಸುವಂತೆ ಆದೇಶಿಸಿದ ತೀರ್ಪಿನಿಂದ ಅವನು ಬೇಸರಗೊಂಡಿದ್ದ. ಅದಾದ ಬಳಿಕ ಅವನು ತಕ್ಷಣ ದೆಹಲಿಗೆ ಹೊರಟನು. ನಾವು ಹೆಚ್ಚಿನ ಮಾಹಿತಿಯನ್ನು ತಿಳಿದಿಲ್ಲ” ಎಂದು ಹೇಳಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ದಾಳಿಗೆ ಮೊದಲು ಸಕ್ರಿಯಾ ಅವರು ಕೆಲವು ದಾಖಲೆಗಳೊಂದಿಗೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಭೇಟಿಯಾಗಿ ಮಾತನಾಡಲು ಮುಂದಾಗಿದ್ದರು. ಆದರೆ ಮಾತನಾಡುವ ವೇಳೆ ತೀವ್ರವಾಗಿ ಕೂಗಲಾರಂಭಿಸಿ, ನಂತರ ಹಠಾತ್‌ ದಾಳಿ ನಡೆಸಿದ್ದಾರೆ. ಅಲ್ಲದೆ, ಕೆಲವರು ಅವರು ಆ ಸಮಯದಲ್ಲಿ ಮದ್ಯಪಾನ ಮಾಡಿರುವಂತಿದ್ದರು ಎಂದು ಹೇಳಿದರೂ, ಇದರ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ.

ಈ ಘಟನೆ ರಾಜಕೀಯ ವಲಯದಲ್ಲಿಯೂ ಭಾರಿ ಚರ್ಚೆಗೆ ಕಾರಣವಾಗಿದ್ದು, ದೆಹಲಿ ಪೊಲೀಸ್‌ ಇಲಾಖೆ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago