ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ರಾಗಿ ಮಾಸಲವಾಡ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಶುಕ್ರವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು.
ಮಂದಿರದಿಂದ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತಲೂ ಪ್ರದಕ್ಷಿಣೆ ಹಾಕಿ ಸಂಭ್ರಮ ಸಡಗರದಿಂದ ರಥವನ್ನು ಎಳೆಯಲಾಯಿತು.ಭಕ್ತರು ಜೈಘೋಷ ಮೊಳಗಿಸಿ ಭಕ್ತಿ ಸಮರ್ಪಿಸಿದರು.
ಯುವ ಸಮೂಹವು ರಥೋತ್ಸವಯುದ್ದಕ್ಕೂ ಪಟಾಕಿ ಸಿಡಿಸಿ,ಬಾಜ ಭಜಂತ್ರಿಯ ಜೊತೆಗೆ ಡೊಳ್ಳು ಕುಣಿತದ ಮೂಲಕ ಸಂಭ್ರಮಿಸಿದರು.ಮಹಿಳೆಯರು ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು.
ರಥವನ್ನು ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.ಜಾತ್ರೆಯ ಅಂಗವಾಗಿ ಮಂದಿರ ಮತ್ತು ಗುಡಿಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದಲ್ಲಿ ರಾಗಿ ಮಾಸಲವಾಡ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಭಕ್ತರು ಹಾಗೂ ದಾವಣಗೆರೆ ವಿಜಯನಗರ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು,ತೆಂಗಿನಕಾಯಿ ಸಮರ್ಪಿಸಿ ಸ್ವಾಮಿಯ ದರ್ಶನ ಮಾಡಿಕೊಂಡರು.ರಥ ಬೀದಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಗಿದ ರಥೋತ್ಸವ ಪುನಃ ಅದೇ ಮಾರ್ಗವಾಗಿ ಹಿಂದಿರುಗಿ ಸಂಪನ್ನಗೊಂಡಿತು.
ವರದಿ:- ಮಣಿಕಂಠ. ಬಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…