Latest

ರಾಗಿ ಮಾಸಲವಾಡದಲ್ಲಿ ಆಂಜನೇಯ ಸ್ವಾಮಿ ರಥೋತ್ಸವ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ರಾಗಿ ಮಾಸಲವಾಡ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಶುಕ್ರವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು.
ಮಂದಿರದಿಂದ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತಲೂ ಪ್ರದಕ್ಷಿಣೆ ಹಾಕಿ ಸಂಭ್ರಮ ಸಡಗರದಿಂದ ರಥವನ್ನು ಎಳೆಯಲಾಯಿತು.ಭಕ್ತರು ಜೈಘೋಷ ಮೊಳಗಿಸಿ ಭಕ್ತಿ ಸಮರ್ಪಿಸಿದರು.
ಯುವ ಸಮೂಹವು ರಥೋತ್ಸವಯುದ್ದಕ್ಕೂ ಪಟಾಕಿ ಸಿಡಿಸಿ,ಬಾಜ ಭಜಂತ್ರಿಯ ಜೊತೆಗೆ ಡೊಳ್ಳು ಕುಣಿತದ ಮೂಲಕ ಸಂಭ್ರಮಿಸಿದರು.ಮಹಿಳೆಯರು ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು.
ರಥವನ್ನು ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.ಜಾತ್ರೆಯ ಅಂಗವಾಗಿ ಮಂದಿರ ಮತ್ತು ಗುಡಿಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ರಥೋತ್ಸವದಲ್ಲಿ ರಾಗಿ ಮಾಸಲವಾಡ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಭಕ್ತರು ಹಾಗೂ ದಾವಣಗೆರೆ ವಿಜಯನಗರ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು,ತೆಂಗಿನಕಾಯಿ ಸಮರ್ಪಿಸಿ ಸ್ವಾಮಿಯ ದರ್ಶನ ಮಾಡಿಕೊಂಡರು.ರಥ ಬೀದಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಗಿದ ರಥೋತ್ಸವ ಪುನಃ ಅದೇ ಮಾರ್ಗವಾಗಿ ಹಿಂದಿರುಗಿ ಸಂಪನ್ನಗೊಂಡಿತು.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

6 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago