ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ರಾಗಿ ಮಾಸಲವಾಡ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಶುಕ್ರವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು.
ಮಂದಿರದಿಂದ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತಲೂ ಪ್ರದಕ್ಷಿಣೆ ಹಾಕಿ ಸಂಭ್ರಮ ಸಡಗರದಿಂದ ರಥವನ್ನು ಎಳೆಯಲಾಯಿತು.ಭಕ್ತರು ಜೈಘೋಷ ಮೊಳಗಿಸಿ ಭಕ್ತಿ ಸಮರ್ಪಿಸಿದರು.
ಯುವ ಸಮೂಹವು ರಥೋತ್ಸವಯುದ್ದಕ್ಕೂ ಪಟಾಕಿ ಸಿಡಿಸಿ,ಬಾಜ ಭಜಂತ್ರಿಯ ಜೊತೆಗೆ ಡೊಳ್ಳು ಕುಣಿತದ ಮೂಲಕ ಸಂಭ್ರಮಿಸಿದರು.ಮಹಿಳೆಯರು ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು.
ರಥವನ್ನು ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.ಜಾತ್ರೆಯ ಅಂಗವಾಗಿ ಮಂದಿರ ಮತ್ತು ಗುಡಿಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದಲ್ಲಿ ರಾಗಿ ಮಾಸಲವಾಡ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಭಕ್ತರು ಹಾಗೂ ದಾವಣಗೆರೆ ವಿಜಯನಗರ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು,ತೆಂಗಿನಕಾಯಿ ಸಮರ್ಪಿಸಿ ಸ್ವಾಮಿಯ ದರ್ಶನ ಮಾಡಿಕೊಂಡರು.ರಥ ಬೀದಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಗಿದ ರಥೋತ್ಸವ ಪುನಃ ಅದೇ ಮಾರ್ಗವಾಗಿ ಹಿಂದಿರುಗಿ ಸಂಪನ್ನಗೊಂಡಿತು.
ವರದಿ:- ಮಣಿಕಂಠ. ಬಿ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…