ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ರಾಗಿ ಮಾಸಲವಾಡ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಶುಕ್ರವಾರ ಅದ್ಧೂರಿಯಾಗಿ ರಥೋತ್ಸವ ನಡೆಯಿತು.
ಮಂದಿರದಿಂದ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ರಥದ ಸುತ್ತಲೂ ಪ್ರದಕ್ಷಿಣೆ ಹಾಕಿ ಸಂಭ್ರಮ ಸಡಗರದಿಂದ ರಥವನ್ನು ಎಳೆಯಲಾಯಿತು.ಭಕ್ತರು ಜೈಘೋಷ ಮೊಳಗಿಸಿ ಭಕ್ತಿ ಸಮರ್ಪಿಸಿದರು.
ಯುವ ಸಮೂಹವು ರಥೋತ್ಸವಯುದ್ದಕ್ಕೂ ಪಟಾಕಿ ಸಿಡಿಸಿ,ಬಾಜ ಭಜಂತ್ರಿಯ ಜೊತೆಗೆ ಡೊಳ್ಳು ಕುಣಿತದ ಮೂಲಕ ಸಂಭ್ರಮಿಸಿದರು.ಮಹಿಳೆಯರು ಆರತಿ ಬೆಳಗುವ ಮೂಲಕ ಭಕ್ತಿ ಸಮರ್ಪಿಸಿದರು.
ರಥವನ್ನು ಪುಷ್ಪ ಮಾಲೆಗಳಿಂದ ಅಲಂಕರಿಸಲಾಗಿತ್ತು.ಜಾತ್ರೆಯ ಅಂಗವಾಗಿ ಮಂದಿರ ಮತ್ತು ಗುಡಿಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದಲ್ಲಿ ರಾಗಿ ಮಾಸಲವಾಡ ಗ್ರಾಮದ ಸುತ್ತ ಮುತ್ತಲಿನ ಗ್ರಾಮದ ಭಕ್ತರು ಹಾಗೂ ದಾವಣಗೆರೆ ವಿಜಯನಗರ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು,ತೆಂಗಿನಕಾಯಿ ಸಮರ್ಪಿಸಿ ಸ್ವಾಮಿಯ ದರ್ಶನ ಮಾಡಿಕೊಂಡರು.ರಥ ಬೀದಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ಸಾಗಿದ ರಥೋತ್ಸವ ಪುನಃ ಅದೇ ಮಾರ್ಗವಾಗಿ ಹಿಂದಿರುಗಿ ಸಂಪನ್ನಗೊಂಡಿತು.
ವರದಿ:- ಮಣಿಕಂಠ. ಬಿ
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…