ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಈ ಟ್ಯಾಂಕರ್ ಅಗಸೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾಗಿದೆ.
ಬೆಂಕಿಯ ಜ್ವಾಲೆಗಳು ಭೀಕರವಾಗಿ ಆವರಿಸಿದ್ದರಿಂದ ರಸ್ತೆಯ ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೂ ಬೆಂಕಿ ಹರಡಿದ್ದು, ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಯಲ್ಲಾಪುರ-ಹುಬ್ಬಳ್ಳಿ ಮಾರ್ಗದ ವಾಹನ ಸಂಚಾರವನ್ನು ಪೊಲೀಸರು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ. ಸದ್ಯ ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆಯಿದೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…